ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ  ಭಕ್ತರಿಗಾಗಿ ವಿಶೇಷ ಸೇವೆಯೊಂದನ್ನು ಆರಂಭ ಮಾಡಲಾಗಿದೆ. ಇದರಿಂದ ಭಕ್ತರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲ ಒದಗಿದೆ. 

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಸೇವೆಯನ್ನು ಬುಧವಾರ ಸಂಜೆ ಶ್ರೀ ದೇವಳದ ವತಿಯಿಂದ ನಡೆಸಲಾಯಿತು. ಗುರುವಾರ ದಿಂದ ಭಕ್ತರಿಗೆ ಸಂಜೆಯ ಸೇವೆಗೆ ಅವಕಾಶ ಒದಗಿಸ ಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈವರೆಗೆ ಕುಕ್ಕೆ ದೇವಳದಲ್ಲಿ ಈ ಸೇವೆಯನ್ನು ಬೆಳಗ್ಗಿನ ಸಮಯದಲ್ಲಿ ಮಾತ್ರ ನಡೆಸಲಾಗುತ್ತಿತ್ತು. ಇದರಿಂದ ಭಕ್ತರಿಗೆ ಒತ್ತಡ ಉಂಟಾಗುತ್ತಿತ್ತು. ಇದನ್ನು ನಿವಾರಣೆಗಾಗಿ ಸಂಜೆ ವೇಳೆಯೂ ಆಶ್ಲೇಷ ಬಲಿ ಸೇವೆ ನಡೆಸಲು ನಿರ್ಧರಿಸಿದೆ. ಬುಧವಾರ ಸಂಜೆ 6 ಗಂಟೆಗೆ ಶ್ರೀ ದೇವಳದ ವತಿಯಿಂದ ಆಶ್ಲೇಷ ಬಲಿ ಸೇವೆ ಆರಂಭವಾಯಿತು. 

ಯಾವುದೇ ಬುಕ್ಕಿಂಗ್ ಇಲ್ಲ: ಆಶ್ಲೇಷ ಬಲಿ ಸೇವೆ ನೆರವೇರಿಸಲು ಮುಂಗಡ ಬುಕ್ಕಿಂಗ್ ಇರುವುದಿಲ್ಲ. ಬೆಳಗ್ಗೆ 3 ಹಂತದಲ್ಲಿ, ಸಂಜೆ 1 ಹಂತದಲ್ಲಿ ನಡೆಯಲಿದೆ. ಸಂಜೆಯ ಆಶ್ಲೇಷ ಬಲಿ ಸೇವೆಗೆ ಭಕ್ತರು ಮಧ್ಯಾಹ್ನ 12.30ರಿಂದ 4.30ರವರೆಗೆ ಸೇವಾ ರಶೀದಿ ಪಡೆಯಬಹುದು. ಸಂಜೆ 5 ರ ನಂತರ ಸೇವೆ ಪ್ರಾರಂಭವಾಗುತ್ತದೆ.