Asianet Suvarna News Asianet Suvarna News

ನೆಲಮಂಗಲದಿಂದ ಸ್ಪರ್ಧೆ ಮಾಡಲಿದ್ದಾರಾ ಎಲ್.ಹನುಮಂತಯ್ಯ..?

ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

L Hanumanthaiah May Contest Frome Nelamgala

ನೆಲಮಂಗಲ :  ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯ ನಾಯಕತ್ವವೇ ಹನುಮಂತಯ್ಯ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವೊಲಿಸಿದೆ ಎನ್ನಲಾಗುತ್ತಿದೆ. ಇಷ್ಟಾಗಿಯೂ ಸ್ಥಳೀಯರಾದ ಕಮಲಾಕ್ಷಿ ರಾಜಣ್ಣ ಅವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಶಾಸಕ ನಾಗರಾಜ್ ಅವರ ಹೆಸರು ಮುಂಚೂಣಿಯಲ್ಲಿದೆ. ಜತೆಗೆ ಹೊಂಬಯ್ಯ ಎಂಬುವರ ಹೆಸರೂ ಕೇಳಿಬರುತ್ತಿದೆ.

Follow Us:
Download App:
  • android
  • ios