ಶೌಚಾಲಯ ನಿರ್ಮಾಣ ಮಾಡಲು ಗ್ರಾಮಸ್ಥರು ಅವಕಾಶ ನೀಡಲಿಲ್ಲ ಎಂದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರ ಸಮ್ಮುಖದಲ್ಲೇ ಯುವತಿ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ದಾವಣಗೆರೆ(ನ.28): ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಲ್ಲಿಯೂ ಕೂಡ ಶೌಚಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ನೈರ್ಮಲ್ಯ ಕಾಯ್ದುಕೊಳ್ಳುವ ಯತ್ನ ನಡೆಯುತ್ತಿದೆ. ಇಲ್ಲೋರ್ವ ಯುವತಿ ಶೌಚಾಲಯ ನಿರ್ಮಾಣಕ್ಕಾಗಿ ಜೀವವನ್ನೇ ಕಳೆದುಕೊಂಡಿರುವ ಮನಕಲುಕುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶೌಚಾಲಯ ನಿರ್ಮಾಣ ಮಾಡಲು ಗ್ರಾಮಸ್ಥರು ಅವಕಾಶ ನೀಡಲಿಲ್ಲ ಎಂದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಕಿಯಿಂದ ಸಂಪೂರ್ಣ ದೇಹವು ಸುಟ್ಟು ಕರಕಲಾಗಿದೆ. ಪೊಲೀಸರ ಸಮ್ಮುಖದಲ್ಲೇ ಯುವತಿ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.
