ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ  ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್’​ಗೆ ಮತ್ತೊಂದು ಕಂಟಕ ಎದುರಾಗಿದೆ.  ಸಿಬಿಐ ಕೋರ್ಟ್ ಇಂದು 4 ನೇ ಪ್ರಕರಣದ ತೀರ್ಪು ಪ್ರಕಟಿಸಲಿದೆ. ಮೇವು ಹಗರಣದ 4ನೇ ಪ್ರಕರಣದ ವಾದ-ಪ್ರತಿವಾದ ಆಲಿಸಿರುವ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.  ಅದರ ತೀರ್ಪನ್ನು  ಇಂದು ಪ್ರಕಟಿಸಲಿದೆ. ಲಾಲುಗೆ ಕಂಟಕ ಎದುರಾಗುತ್ತಾ? ಇಲ್ಲವಾ ಎಂಬುದು ನಿರ್ಧಾರವಾಗಲಿದೆ. 

ನವದೆಹಲಿ (ಮಾ. 17): ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್’​ಗೆ ಮತ್ತೊಂದು ಕಂಟಕ ಎದುರಾಗಿದೆ. ಸಿಬಿಐ ಕೋರ್ಟ್ ಇಂದು 4 ನೇ ಪ್ರಕರಣದ ತೀರ್ಪು ಪ್ರಕಟಿಸಲಿದೆ. 
ಮೇವು ಹಗರಣದ 4ನೇ ಪ್ರಕರಣದ ವಾದ-ಪ್ರತಿವಾದ ಆಲಿಸಿರುವ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ. ಅದರ ತೀರ್ಪನ್ನು ಇಂದು ಪ್ರಕಟಿಸಲಿದೆ. ಲಾಲುಗೆ ಕಂಟಕ ಎದುರಾಗುತ್ತಾ? ಇಲ್ಲವಾ ಎಂಬುದು ನಿರ್ಧಾರವಾಗಲಿದೆ. 

Add Asianetnews Kannada as a Preferred SourcegooglePreferred

ಲಾಲೂ ಅವಧಿಯಲ್ಲಿ ಬಿಹಾರದಲ್ಲಿ ನಡೆದಿದ್ದ ಬಹುಕೋಟಿ ಮೇವು ಹಗರಣ ಭಾರೀ ಸದ್ದು ಮಾಡಿತ್ತು. ಈಗಾಗಲೇ ಮೂರು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಜೈಲು ಸೇರಿದ್ದಾರೆ. ನಾಲ್ಕನೆಯದು ಇಂದು ನಿರ್ಧಾರವಾಘಲಿದೆ. ​