ಐಶ್ವರ್ಯ ರಾಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿವಾಹದಲ್ಲಿ ವಿರಸ ಎದುರಾಗಿದೆ ಎನ್ನಲಾಗಿದ್ದು ಆದರೆ ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. 

ಪಟನಾ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟ6 ತಿಂಗಳಲ್ಲೇ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 

Add Asianetnews Kannada as a Preferred SourcegooglePreferred

ಇದೇ ವರ್ಷದ ಮೇ 12ರಂದು ತೇಜ್‌ ಪ್ರತಾಪ್‌ ಅವರು, ಆರ್‌ಜೆಡಿ ಮುಖಂಡ ಚಂದ್ರಿಕಾ ರೈ ಅವರ ಪುತ್ರಿ ಐಶ್ವರ್ಯ ರಾಯ್‌ ಅವರನ್ನು ವರಿಸಿದ್ದರು. ಆದರೆ, ಇದೀಗ ತೇಜ್‌ ಪ್ರತಾಪ್‌ ಪಟನಾ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಆದರೆ, ಈ ವಿಚ್ಛೇದನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. 

ಬಿಹಾರದ ಮಾಜಿ ಸಿಎಂ ಆಗಿರುವ ದರೋಗಾ ಪ್ರಸಾದ್‌ ರೈ ಅವರ ಮೊಮ್ಮಗಳಾಗಿದ್ದ ಐಶ್ವರ್ಯ ರೈ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಆರ್‌ಜೆಡಿ ಟಿಕೆಟ್‌ನಿಂದ ಕಣಕ್ಕಿಳಿಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ, ವಿಚ್ಛೇದನದ ಸುದ್ದಿ ಹೊರಬಿದ್ದಿದೆ.