ಮುದಗಾ ಗುಡ್ಡ ಪ್ರದೇಶದಲ್ಲಿ ಮಣ್ಣು ಕುಸಿತ | ರಾಷ್ಟ್ರೀಯ ಹೆದ್ದಾರಿ 66ರಲ್ಲಿ 5 ಗಂಟೆ ಕಾಲ ಸಂಚಾರ ಬಂದ್ | ರಸ್ತೆಯಲ್ಲೇ ನಿಂತು ವಾಹನ ಸವಾರರ ಪರದಾಟ
ಕಾರವಾರ (ಅ.11): ಕಾರವಾರ ತಾಲೂಕಿನ ಮುದಗಾ ಗುಡ್ಡ ಪ್ರದೇಶದಲ್ಲಿ ಭಾರೀ ಮಳೆಗೆ ಮಣ್ಣು ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 5 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಬಳಿಕ ಜೆಸಿಬಿ ಯಂತ್ರದೊಂದಿಗೆ ಬಂದ ಪೊಲೀಸರು ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮಂಗಳೂರು ಗೋವಾ ಹಾಗೂ ಕಾರವಾರ ಹುಬ್ಬಳ್ಳಿ ನಡುವಿನ ಸಂಚಾರ ಅಸ್ತವ್ಯಸ್ತವಾಗಿತ್ತು.
5 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಣ್ಣು ಕುಸಿಯುತ್ತಿದೆ ಎನ್ನಲಾಗಿದೆ.
