Asianet Suvarna News Asianet Suvarna News

ಜಲಪಾತ ಬಳಿ ಕುಸಿದ ಗುಡ್ಡ : ರೈಲು ಸಂಚಾರ ಸ್ಥಗಿತ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಭಾರೀ ಮಳೆಯಿಂದ ದೂಧಸಾಗರ ಜಲಪಾತದ ಬಳಿಯಲ್ಲಿ ಭೂಮಿ ಕುಸಿದಿದ್ದು ರೈಲ್ವೆ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. 

Landslide Near Dudhsagar Falls Due To Heavy Rain
Author
Bengaluru, First Published Aug 22, 2018, 7:47 AM IST

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ಅರಣ್ಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮಂಗಳವಾರವೂ ಮುಂದುವರಿದಿದೆ. ಗೋವಾ ರಾಜ್ಯ ವ್ಯಾಪ್ತಿಯ ದೂಧಸಾಗರ ಜಲಪಾತದ ಬಳಿ ಮಂಗಳವಾರ ಗುಡ್ಡ ಕುಸಿದಿದ್ದು, ನಿಜಾಮುದ್ದೀನ್‌- ವಾಸ್ಕೋ ರೈಲು ಸಂಚಾರ ರದ್ದುಗೊಂಡಿದೆ. 

ಲೋಂಡಾ-ಬೆಳಗಾವಿ- ಮಿರಜ್‌ ರೈಲು ಹಳಿ ಮಾರ್ಗ 37/800ರಿಂದ 900 ಮೀಟರ್‌ ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ ನಿಜಾಮುದ್ದೀನ್‌ ಲಿಂಕ್‌ ಎಕ್ಸ್‌ಪ್ರೆಸ್‌ ಮತ್ತು ವಿಎಸ್‌ಜಿ- ಎಸ್‌ಬಿಸಿ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ಸುರಿಯುತ್ತಿರುವ ಮಳೆಯ ನಡುವೆಯೇ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ. ಗೋವಾದಿಂದ ರೈಲು ಪ್ರಯಾಣಿಕರು ಬಸ್‌ಗಳ ಮೂಲಕ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

Follow Us:
Download App:
  • android
  • ios