ಸಾಮಾನ್ಯವಾಗಿ ರೈಲುಗಳು ಸಮಯಕ್ಕೆ ಸರಿಯಾಗಿ ಹೊರಡದಿರುವ, ವಿಳಂಬವಾಗಿ ತಲುಪುವ ದೂರುಗಳು ಪ್ರತಿನಿತ್ಯ ಕೇಳುತ್ತಿರುತ್ತೇವೆ. ಆದರೆ, ಇನ್ನುಮುಂದೆ ರೈಲುಗಳು ವಿಳಂಬವಾಗಿ ಹೊರಟರೆ ರೈಲ್ವೆ ಸಿಬ್ಬಂದಿಯ ಬಡ್ತಿಗೇ ಕತ್ತರಿಬೀಳುವ ಸಾಧ್ಯತೆ ಇದೆ. ಇಂತಹ ಒಂದು ಗಂಭೀರ ಎಚ್ಚರಿಕೆಯನ್ನು ರೈಲ್ವೆ ಸಚಿವ ಪೀಯೂಶ್ ಗೋಯಲ್ ಅಧಿಕಾರಿಗಳಿಗೆ ನೀಡಿದ್ದಾರೆ.

ನವದೆಹಲಿ (ಜು. 04): ಸಾಮಾನ್ಯವಾಗಿ ರೈಲುಗಳು ಸಮಯಕ್ಕೆ ಸರಿಯಾಗಿ ಹೊರಡದಿರುವ, ವಿಳಂಬವಾಗಿ ತಲುಪುವ ದೂರುಗಳು ಪ್ರತಿನಿತ್ಯ ಕೇಳುತ್ತಿರುತ್ತೇವೆ. ಆದರೆ, ಇನ್ನುಮುಂದೆ ರೈಲುಗಳು ವಿಳಂಬವಾಗಿ ಹೊರಟರೆ ರೈಲ್ವೆ ಸಿಬ್ಬಂದಿಯ ಬಡ್ತಿಗೇ ಕತ್ತರಿಬೀಳುವ ಸಾಧ್ಯತೆ ಇದೆ. ಇಂತಹ ಒಂದು ಗಂಭೀರ ಎಚ್ಚರಿಕೆಯನ್ನು ರೈಲ್ವೆ ಸಚಿವ ಪೀಯೂಶ್ ಗೋಯಲ್ ಅಧಿಕಾರಿಗಳಿಗೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವಾರ ನಡೆದ ಆಂತರಿಕ ಸಭೆಯೊಂದರಲ್ಲಿ ಮಾತನಾಡಿದ ಗೋಯಲ್, ತಮ್ಮ ತಮ್ಮ ವಲಯಗಳಲ್ಲಿ ರೈಲ್ವೆ ಸೇವೆ ವಿಳಂಬವಾದರೆ, ಬಡ್ತಿ ಅವಕಾಶಕ್ಕೆ ತೊಂದರೆಯಾಗ ಲಿದೆ ಎಂದು ಎಲ್ಲ ರೈಲ್ವೆ ವಲಯಗಳ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.

ಹಿರಿಯ ಅಧಿಕಾರಿ ಗಳನ್ನು ರೈಲು ವಿಳಂಬ ದೂರುಗಳ ಬಗ್ಗೆ ತರಾಟೆಗೆ ತೆಗೆದುಕೊಂಡ ಸಚಿವರು, ನಿರ್ವಹಣೆ ಕಾರಣ ನೀಡಿ ರೈಲು ವಿಳಂಬ ಆಗುವಂತಿಲ್ಲ. ಸಮಯಕ್ಕೆ ಸರಿಯಾಗಿ ರೈಲುಗಳು ಹೊರಡಲು ಮತ್ತು ತಲುಪಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.