ಸುಪ್ರೀಂಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಪೂರ್ಣಪೀಠಕ್ಕೆ ಮನವಿ ಮಾಡಬೇಕು

ವಿಧಾನಸೌಧ(ಅ.01): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಬೇಡ ಎಂದು ಸರ್ವ ಪಕ್ಷ ಸಭೆಯಲ್ಲಿ ಬಹುತೇಕ ನಾಯಕರು ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಯಾವ ರೀತಿಯ ಹೋರಾಟ ನಡೆಸಬೇಕು, ಕಾಂಗ್ರೆಸ್ ಪಾತ್ರವೇನು..? ಮತ್ತು ಬಿಜೆಪಿ ನಾಯಕರು ಹೈಕಮಾಂಡ್ ಮನವೊಲಿಸುವ ಬಗ್ಗೆಯೂ ಮಾತುಕತೆ ನಡೆದಿದೆ.

ಸುಪ್ರೀಂಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಪೂರ್ಣಪೀಠಕ್ಕೆ ಮನವಿ ಮಾಡಬೇಕು. ಕಾವೇರಿ ನಿರ್ವಹಣಾ ಮಂಡಳಿ ರಚನೆಯನ್ನ ತಡೆಹಿಡಿಯಲು ಗರಿಷ್ಠ ಪ್ರಯತ್ನ ಅಗತ್ಯ, ಕೇಂದ್ರ ಸರ್ಕಾರಕ್ಕೂ ರಾಜ್ಯದ ನಿಲುವು ಸ್ಪಷ್ಟಪಡಿಸಿ ಎಂದು ಸರ್ವಪಕ್ಷ ಸಭೆಯಲ್ಲಿ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.