ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿವಿ (ಕೆಎಸ್‌ಒಯು) ಮಾನ್ಯತೆಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ರದ್ದುಪಡಿಸಿದ ಬಳಿಕವೂ ಪದವಿ ತರಗತಿಗಳಿಗೆ ನೋಂದಣಿ ಮಾಡಿ ವಿದ್ಯಾರ್ಥಿಯೊಬ್ಬರ ಭವಿಷ್ಯಕ್ಕೆ ಅಡ್ಡಿಪಡಿಸಿದ ಪರಿಣಾಮ ಗ್ರಾಹಕರ ಹಕ್ಕುಗಳ ಕೋರ್ಟ್ 2 ಲಕ್ಷ ರು. ದಂಡ ವಿಧಿಸಿ ಆದೇಶಿಸಿದೆ.

ಬೆಂಗಳೂರು(ಸೆ.04): ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿವಿ (ಕೆಎಸ್‌ಒಯು) ಮಾನ್ಯತೆಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ರದ್ದುಪಡಿಸಿದ ಬಳಿಕವೂ ಪದವಿ ತರಗತಿಗಳಿಗೆ ನೋಂದಣಿ ಮಾಡಿ ವಿದ್ಯಾರ್ಥಿಯೊಬ್ಬರ ಭವಿಷ್ಯಕ್ಕೆ ಅಡ್ಡಿಪಡಿಸಿದ ಪರಿಣಾಮ ಗ್ರಾಹಕರ ಹಕ್ಕುಗಳ ಕೋರ್ಟ್ 2 ಲಕ್ಷ ರು. ದಂಡ ವಿಧಿಸಿ ಆದೇಶಿಸಿದೆ.

Add Asianetnews Kannada as a Preferred SourcegooglePreferred

ಮಾನ್ಯತೆ ಇಲ್ಲದಿದ್ದರೂ ಪದವಿ ನೀಡಲಾಗಿದೆ. ಅಲ್ಲದೇ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಸಾಧ್ಯವಿಲ್ಲದಂತಾಗಿದೆ. ಇದರಿಂದ ಮುಂದಿನ ಅಧ್ಯಯನಕ್ಕೆ ಅವಕಾಶವಿಲ್ಲದೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ದಂಡ ವಿಧಿಸಿದೆ.

2011-12ರ ಶೈಕ್ಷಣಿಕ ಸಾಲಿನಲ್ಲಿ ಬಿಎ ವ್ಯಾಸಂಗ ಮಾಡಲು ರೂಪಶ್ರೀ ಎಂಬುವರಿಗೆ ಅವಕಾಶ ಮಾಡಿಕೊಟ್ಟಿದ್ದ ಕೆಎಸ್‌'ಒಯು 2012-14ನೇ ಸಾಲಿನಲ್ಲಿ ಪದವಿ ಪ್ರಮಾಣಪತ್ರ ನೀಡಿತ್ತು. ನಂತರ ಕಾನೂನು ಪದವಿ ಅಭ್ಯಾಸ ಮಾಡಲು ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಪ್ರವೇಶ ಪಡೆದು ಶುಲ್ಕ ಪಾವತಿಸಿದ್ದರು. ಆದರೆ, ಕೆಎಸ್‌'ಒಯುಗೆ ಯುಜಿಸಿ ಮಾನ್ಯತೆ ಇಲ್ಲದ ಪರಿಣಾಮ ಅವರ ನೋಂದಣಿ ರದ್ದಾಗಿತ್ತು. ಇದನ್ನು ರೂಪಶ್ರೀ ಮೈಸೂರಿನ ಗ್ರಾಹಕರ ಹಕ್ಕುಗಳ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಕೆಎಸ್‌'ಒಯುಗೆ ಎರಡು ಲಕ್ಷ ದಂಡ ವಿಧಿಸಿದೆ. ಅಲ್ಲದೆ, ದಂಡದ ಮೊತ್ತವನ್ನು ಪರಿಹಾರವಾಗಿ ವಿದ್ಯಾರ್ಥಿನಿಗೆ ನೀಡುವಂತೆ ಸೂಚಿಸಿದೆ.