ಸಿ ಟಿ ರವಿಗೆ ಜೀವ ಬೆದರಿಕೆ
ಶಾಸಕ ಹಾಗೂ ಮಾಜಿ ಸಚಿವ ಸಿ.ಟಿ ರವಿ ಗೆ ಕೊಲೆ ಬೆದರಿಕೆ ಬಂದಿದೆ.
ಚಿಕ್ಕಮಗಳೂರು (ಜ.30): ಶಾಸಕ ಹಾಗೂ ಮಾಜಿ ಸಚಿವ ಸಿ.ಟಿ ರವಿ ಗೆ ಕೊಲೆ ಬೆದರಿಕೆ ಬಂದಿದೆ.
ರೌಡಿ ಪರ್ವೇಜ್ ಎಂಬ ಹೆಸರಲ್ಲಿ ಸಿ.ಟಿ.ರವಿಗೆ ಬೆದರಿಕೆ ಪತ್ರ ಬಂದಿದೆ. ರವಿಯನ್ನು ಹತ್ಯೆ ಮಾಡುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಮಾಡಿರುವುದು ಆರ್'ಎಸ್'ಎಸ್ ಅನ್ನೋದು ಗೊತ್ತಿದೆ. ದೀಪಕ್ ರಾವ್ ಹತ್ಯೆ ಹಿಂದೆ ನಮ್ಮ ಕೈವಾಡ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಪತ್ರದಲ್ಲಿ ರಾಜ್ಯ ಬಿಜೆಪಿ ನಾಯಕರ ಬಗ್ಗೆ ಅವಹೇಳನ ಪದ ಬಳಕೆ ಮಾಡಲಾಗಿದೆ.
ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್'ಪಿ ಅಣ್ಣಾಮಲೈಗೆ ದೂರು ನೀಡಿದ್ದಾರೆ.