Asianet Suvarna News Asianet Suvarna News

ರಾಜ್ಯ ಕಾಂಗ್ರೆಸ್'ಗೆ ತಿರುಗುಬಾಣವಾಗುತ್ತಾ ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ?

ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ ರಾಜ್ಯ ಕಾಂಗ್ರೆಸ್​'ಗೆ ತಿರುಗುಬಾಣವಾಗುವ ಆತಂಕ ಎದುರಾಗಿದೆ. ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆ ವಿಚಾರದಲ್ಲಿ ಸರ್ಕಾರ ವಿಶೇಷ ಆಸಕ್ತಿ ವಹಿಸುವುದು ಬೇಡ ಎಂದು ಕಾಂಗ್ರೆಸ್​ ಹೈಕಮಾಂಡ್​ ಖಡಕ್​ ಎಚ್ಚರಿಕೆ ನೀಡಿದೆ.

Lingayuth Free Religion Issue May Become Harmful To State Congress

ಬೆಂಗಳೂರು(ಜು.28): ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ ರಾಜ್ಯ ಕಾಂಗ್ರೆಸ್​'ಗೆ ತಿರುಗುಬಾಣವಾಗುವ ಆತಂಕ ಎದುರಾಗಿದೆ. ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆ ವಿಚಾರದಲ್ಲಿ ಸರ್ಕಾರ ವಿಶೇಷ ಆಸಕ್ತಿ ವಹಿಸುವುದು ಬೇಡ ಎಂದು ಕಾಂಗ್ರೆಸ್​ ಹೈಕಮಾಂಡ್​ ಖಡಕ್​ ಎಚ್ಚರಿಕೆ ನೀಡಿದೆ.

ಪ್ರತ್ಯೇಕ  ಲಿಂಗಾಯತ ಧರ್ಮದ ಬೇಡಿಕೆ ವಿಚಾರದಲ್ಲಿ ಮುಂದುವರಿದರೆ ರಾಷ್ಟ್ರೀಯ ಮಟ್ಟದಲ್ಲಿ ಬೇರೆ ಬೇರೆ ಪಂಥಗಳಿಂದ ಇದೇ ಬೇಡಿಕೆ ಬರುವುದರಿಂದ ಪಕ್ಷಕ್ಕೆ ತಲೆನೋವಾಗಬಹುದು. ಕಾಂಗ್ರೆಸ್'​ನ ವೋಟ್​ ಬ್ಯಾಂಕ್​ ಆಗಿರುವ ಮುಸ್ಲಿಂ ಸಮುದಾಯಕ್ಕೂ ಬೇರೆಯದೇ ಸಂದೇಶ ರವಾನೆಯಾಗುವ ಆತಂಕ ಎದುರಾಗಲಿದೆ ಎಂಬ ಎಚ್ಚರಿಕೆ ರಾಜ್ಯ ನಾಯಕರಿಗೆ ತಲುಪಿದೆ.  

ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮವಾಗಿ ವಿಶೇಷ ಮೀಸಲಾತಿ ದೊರೆತರೆ ನಿಜವಾದ ಅಲ್ಪಸಂಖ್ಯಾತರಿಗೆ ಮೀಸಲು ಅವಕಾಶ ಕೈತಪ್ಪಲಿದೆ ಎಂಬ ಆತಂಕವನ್ನೂ  ಹೈಕಮಾಂಡ್​ ವ್ಯಕ್ತಪಡಿಸಿದೆ.

Latest Videos
Follow Us:
Download App:
  • android
  • ios