ನಗರದ ಪೂರ್ವ ಹಾಗೂ ಪಶ್ಚಿಮ ವಲಯದ ಅಧಿಕಾರಿಗಳಾದ ಬಸವಣ್ಣ ಹಾಗೂ ರವಿಶಂಕರ್ ನೇತೃತ್ವದಲ್ಲಿ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯ ಬಾರ್& ಪಬ್'ಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು(ಡಿ.30): ಮುಂಬೈ'ನ ಬಾರ್ ಅಂಡ್ ರೆಸ್ಟೊರೆಂಟ್'ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ, ನಗರದ ಅಗ್ನಿಶಾಮಕ ಅಧಿಕಾರಿಗಳು ಕಾರ್ಯಾಚರಣೆಗಿಳಿದಿದ್ದು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿರದ ಬಾರ್'ಗಳು, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಹೊಸವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಅಗ್ನಿಶಾಮಕ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ನಗರದ ಪೂರ್ವ ಹಾಗೂ ಪಶ್ಚಿಮ ವಲಯದ ಅಧಿಕಾರಿಗಳಾದ ಬಸವಣ್ಣ ಹಾಗೂ ರವಿಶಂಕರ್ ನೇತೃತ್ವದಲ್ಲಿ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯ ಬಾರ್& ಪಬ್'ಗಳ ಮೇಲೆ ದಾಳಿ ನಡೆಸಿದ್ದಾರೆ. ಬಾರ್ & ರೆಸ್ಟೋರೆಂಟ್'ಗಳಲ್ಲಿ ಲಿಫ್ಟ್, ಸ್ಟೇರ್ ಕೇಸ್ ಮುಂತಾದೆಡೆ ಅಗ್ನಿ ನಂದಕಗಳನ್ನು ಅಳವಡಿಸಲಾಗಿದೆಯೇ ಇಲ್ಲವೇ ಎಂಬ ಕುರಿತಂತೆ ದಾಳಿ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ ಬಾರ್ & ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇಂದು ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯ ವರದಿಯನ್ನು ಆಧರಿಸಿ ನಾಳೆ ಕ್ರಮ ಜರುಗಿಸಲು ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ.