ಪತ್ರಕರ್ತನ ಮೇಲೆ ಪೊಲೀಸರ ಹಲ್ಲೆ, ಬಟ್ಟೆಬಿಚ್ಚಿ ಬಾಯಿಗೆ ಮೂತ್ರ| ಹಲ್ಲೆಗೊಳಗಾದ ಪತ್ರಕರ್ತ ಅಮಿತ್‌ ಶರ್ಮಾ ಆರೋಪ

ಲಖನೌ[ಜೂ.13]: ಹಳಿತಪ್ಪಿದ್ದ ಸರಕು ಸಾಗಣೆ ರೈಲೊಂದರ ಬಗ್ಗೆ ವರದಿ ಮಾಡಲು ತೆರಳಿದ್ದ ಟೀವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ನಗರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ನಡುವೆ ಪೊಲೀಸರು ನನ್ನನ್ನು ವಿವಸ್ತ್ರನನ್ನಾಗಿ ಮಾಡಿ ಬಾಯಿಗೆ ಮೂತ್ರ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಪತ್ರಕರ್ತ ಅಮಿತ್‌ ಶರ್ಮಾ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರೈಲ್ವೆ ಅಧಿಕಾರಿಗಳ ಹಗರಣವೊಂದನ್ನು ಕೆಲ ದಿನಗಳ ಹಿಂದೆ ಅಮಿತ್‌ ಬಯಲಿಗೆಳೆದಿದ್ದರು ಎನ್ನಲಾಗಿದೆ.

Scroll to load tweet…

ಈ ಹಿನ್ನೆಲೆಯಲ್ಲಿ ಮುಫ್ತಿಯಲ್ಲಿದ್ದ ರೈಲ್ವೆ ಪೊಲೀಸರಿಬ್ಬರು, ಮಂಗಳವಾರ ರಾತ್ರಿ ವರದಿಗೆಂದು ತೆರಳಿದ್ದ ಅಮಿತ್‌ ಮೇಲೆ ವಿನಾಕಾರಣ ಹಲ್ಲೆ ನಡೆಸಿದ್ದಾರೆ.