ಲೋಕಸಭಾ ಚುನಾವಣೆಯೊಂದಿಗೆ ರಾಜ್ಯದಲ್ಲಿಯೂ ಕೂಡ ಚುನಾವಣೆ ನಡೆಸುವ ಬಗ್ಗೆ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿದೆ. ಇನ್ನು ದೇಶದಲ್ಲಿ ಲೋಕಸಭಾ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎಂಬ ಸಾಧ್ಯ-ಸಾಧ್ಯತೆಯ ಕುರಿತು ಚರ್ಚಿಸಲು ಕಾನೂನು ಆಯೋಗ ಕರೆದ ಸಭೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಗೈರಾಗಿದ್ದವು.

ನವದೆಹಲಿ: ದೇಶದಲ್ಲಿ ಲೋಕಸಭಾ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎಂಬ ಸಾಧ್ಯ-ಸಾಧ್ಯತೆಯ ಕುರಿತು ಚರ್ಚಿಸಲು ಕಾನೂನು ಆಯೋಗ ಕರೆದ ಸಭೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಗೈರಾಗಿದ್ದವು.

Add Asianetnews Kannada as a Preferred SourcegooglePreferred

 ಇನ್ನು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸುವುದರಿಂದ ರಾಷ್ಟ್ರೀಯ ಹಿತಾಸಕ್ತಿಗಳು ಮುನ್ನೆಲೆಗೆ ಬರಲಿದ್ದು, ರಾಷ್ಟ್ರೀಯ ಪಕ್ಷಗಳಿಗೆ ಅನುಕೂಲವಾಗುತ್ತದೆ. 

ಇಂಥ ಕ್ರಮದಿಂದ ಸ್ಥಳೀಯ ವಿಚಾರಗಳು ಗೌಣವಾಗುತ್ತವೆ ಎಂಬುದಾಗಿ ಸಭೆಯಲ್ಲಿ ಭಾಗವಹಿಸಿದ್ದ ಪ್ರಾದೇಶಿಕ ಪಕ್ಷಗಳು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿವೆ. ಈ ಪ್ರಸ್ತಾವವನ್ನು ತೃಣಮೂಲ ಕಾಂಗ್ರೆಸ್‌, ಸಿಪಿಐ ಪಕ್ಷಗಳು ವಿರೋಧಿಸಿದವು. 

ಇನ್ನು ಒಟ್ಟಿಗೆ ಚುನಾವಣೆ ನಡೆಸುವುದಾದರೆ ಅದು 2024ಕ್ಕೆ ನಡೆಸಬೇಕು. ಅದಕ್ಕೂ ಮುನ್ನ ನಡೆಸಲೇಬಾರದು ಎಂದು ಎಐಎಡಿಎಂಕೆ ತನ್ನ ಅಭಿಪ್ರಾಯ ತಿಳಿಸಿತು. ಎನ್‌ಡಿಎ ಮಿತ್ರಪಕ್ಷ ಶಿರೋಮಣಿ ಅಕಾಲಿದಳ ಆಯೋಗದ ಪ್ರಸ್ತಾವವನ್ನು ಬೆಂಬಲಿಸಿತು.