ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆ ಶೇಕಡ 10 ರಷ್ಟು ಮೀಸಲು ನೀಡುವ ಮಸೂದೆಗೆ ಲೋಕಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಬುಧವಾರ ಈ ಮಸೂದೆ ರಾಜ್ಯಸಭೆಯಲ್ಲಿ ಚರ್ಚೆಗೆ ಬರಲಿದೆ.

ನವದೆಹಲಿ[ಜ.08] ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ದಿಟ್ಟ ಕ್ರಮಕ್ಕೆ ಲೋಕಸಭೆ ಒಪ್ಪಿಗೆ ನೀಡಿದೆ. ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲು ನೀಡುವ ಮಸೂದೆ ಲೋಕಸಭೆಯಲ್ಲಿ ಪಾಸ್ ಆಗಿದೆ.

Add Asianetnews Kannada as a Preferred SourcegooglePreferred

ನಿರೀಕ್ಷೆಯಂತೆ ಮಂಗಳವಾರ ಮಸೂದೆ ಬಿಲ್ ಲೋಕಸಭೆಯಲ್ಲಿ ಪಾಸ್ ಆಗಿದೆ. ಸೋಮವಾರ ನವದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು ಇಂದು ಮಂಡನೆ ಮಾಡಲಾಯಿತು.

ಬಂದ್‌ನಿಂದ ರಾಜ್ಯಕ್ಕಾದ ನಷ್ಟವೆಷ್ಟು ಗೊತ್ತಾ?

ಈ ಮಸೂದೇ ಜಾರಿಗೆ ಬಂದರೆ ಉನ್ನತ ವರ್ಗಗಳಾದ ಜಾಟ್, ಗುಜ್ಜಾರ್, ರಜಪೂತ್, ಬನಿಯಾ, ಬ್ರಾಹ್ಮಣ ಸಮುದಾಯಕ್ಕೆ ಅನುಕೂಲವಾಗಲಿದೆ. 

ಮೇಲ್ಜಾತಿ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ, ಮೋದಿ ಘೋಷಣೆ..!

ಈ ಮೀಸಲಾತಿಗೆ ಇರುವ ಕೆಲ ಷರತ್ತುಗಳು 
* ಶೇ.10ರಷ್ಟು ಮೀಸಲಾತಿ ಪಡೆಯಬೇಕಿದ್ದರೆ ಅವರ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕೆಳಗಿರಬೇಕು. 
* 5 ಎಕರೆ ಭೂಮಿ, 1000 ಚದುರ ಅಡಿಗಿಂತ ಕಡಿಮೆ ವಿಸ್ತೀರ್ಣ ಮನೆ ಹೊಂದಿರಬೇಕು.