ಲೋಕಸಭಾ ಚುನಾವಣೆ : ಇವರಿಗೆಲ್ಲಾ ಕಾಂಗ್ರೆಸ್ ಟಿಕೆಟ್ ಇಲ್ಲ
ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸುತ್ತಿವೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋತವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದ್ದಾರೆ.
ನವದೆಹಲಿ: 2019 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.
ಅಲ್ಲದೇ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಕೂಡ ಹೆಚ್ಚು ಮುತುವರ್ಜಿ ವಹಿಸಲಾಗುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ನಿಟ್ಟಿನಲ್ಲಿ ಹೆಚ್ಚಿನ ಆಸ್ತೆ ವಹಿಸುತ್ತಿದ್ದಾರೆ.
ದೆಹಲಿ ಅಧಿಕಾರದ ಗದ್ದುಗೆಗೇರಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ‘ಅಭ್ಯರ್ಥಿಗಳ ಆಯ್ಕೆ ವೇಳೆ 2 - 3 ಬಾರಿ ಸೋತವರ ಬದಲಿಗೆ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ,’ ಸಲಹೆ ನೀಡಿದರು.