ಸದ್ಯ ದೇಶದಲ್ಲಿ ನೇಮಕವಾಗಿರುವ ಲೋಕಪಾಲ್ ಗೆ ಕಣ್ಣು ಕಿವಿ ಯಾವುದು ಇಲ್ಲವೆಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಹಾಸನ : ದೇಶದಲ್ಲಿ ಲೋಕಪಾಲರ ನೇಮಕ ಮಾಡಲಾಗಿದ್ದು, ಈಗ ನೇಮಕವಾಗಿರೋ ಲೋಕಪಾಲ್ ಗೆ ಕಣ್ಣು,ಇಲ್ಲಾ,ಕಿವಿ.ಕೈ ಕಾಲು ಏನೂ ಇಲ್ಲವೆಂದು ಕೇಂದ್ರದ ನಡೆ ವಿರುದ್ದ ಪರೋಕ್ಷವಾಗಿ ಟೀಕಿಸಿದ ನಿವೃತ್ತಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಟೀಕಿಸಿದ್ದಾರೆ.

Add Asianetnews Kannada as a Preferred SourcegooglePreferred

ಕರ್ನಾಟಕದ ಲೋಕಾಯುಕ್ತಕ್ಕೂ ಲೋಕಪಾಲ್ ಗೂ ಯಾವುದೇ ಸಂಬಂಧವಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಲೋಕಪಾಲ್ ರಚನೆ ಮಾಡಲಾಗಿದೆ ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ. 

ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ : ಇತರೆ 8 ಸದಸ್ಯರ ನೇಮಕ

ಅಲ್ಲದೇ ಕೆಲವರು ಚುನಾವಣೆ ಹಿನ್ನೆಲೆಯಲ್ಲಿ ಲೋಕಪಾಲ್ ನೇಮಕವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಲೋಕಪಾಲ್ ನೇಮಕವಾಗದೇ ಇದ್ದಿದ್ದರೆ ಶಿಕ್ಷೆಗೆ ಗುರಿಯಾಗುತ್ತಿದ್ದರು ಎಂದು ಹಾಸನದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. 

ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಪಾಲ ಸಂಸ್ಥೆಯನ್ನು ಕಾಯ್ದೆಬದ್ಧವಾಗಿ ಸ್ಥಾಪಿಸಿ ಐದು ವರ್ಷ ಕಳೆದರೂ ಲೋಕಪಾಲರ ನೇಮಿಸದೇ ಟೀಕೆ ಎದುರಿಸುತ್ತಿದ್ದ ಕೇಂದ್ರ ಸರ್ಕಾರ ಕಳೆದ ಕೆಲ ದಿನಗಳ ಹಿಂದಷ್ಟೇ ಪಿ.ಸಿ ಘೋಷ್ ಅವರನ್ನು ದೇಶದ ಮೊದಲ ಲೋಕಪಾಲರಾಗಿ ನೇಮಕ ಮಾಡಿದೆ.