ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಆಯೋಗವು ರಾಹುಕಾಲದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. 

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ರಾಹುಕಾಲದಲ್ಲಿ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿರುವುದು ರಾಜಕೀಯ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜಕಾರಣಿಗಳು ಇದಕ್ಕೆ ಹೆಚ್ಚಿನ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾನುವಾರ ಸಂಜೆ 4.30ರಿಂದ 6 ಗಂಟೆಯವರೆಗೆ ರಾಹುಕಾಲವಿತ್ತು. ಈ ಅವಧಿಯಲ್ಲೇ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿತು. ಯಾವುದೇ ಕೆಲಸವನ್ನು ರಾಹುಕಾಲದಲ್ಲಿ ಆರಂಭಿಸಬಾರದು ಎಂದು ಶಾಸ್ತ್ರಗಳು ಹೇಳುವುದರಿಂದ ರಾಹುಕಾಲವನ್ನು ತಪ್ಪಿಸಿ ಬೇರೆ ಅವಧಿಯಲ್ಲಿ ಪತ್ರಿಕಾಗೋಷ್ಠಿ ನಡೆಸಬಹುದಿತ್ತು ಎಂಬ ಮಾತುಗಳು ಕೇಳಿಬಂದವು.

ಈ ಪತ್ರಿಕಾಗೋಷ್ಠಿಗೂ ಮುಂಚೆಯೇ ದಕ್ಷಿಣದ ಕೆಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯ ಸಮಯವನ್ನು ಬದಲಿಸಬೇಕೆಂದು ಆಗ್ರಹಿಸಿದ್ದವು. ಅದಕ್ಕೆ ಚುನಾವಣಾ ಆಯೋಗ ಸೊಪ್ಪು ಹಾಕಿಲ್ಲ.