ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಆಯೋಗವು ರಾಹುಕಾಲದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ.
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ರಾಹುಕಾಲದಲ್ಲಿ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿರುವುದು ರಾಜಕೀಯ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜಕಾರಣಿಗಳು ಇದಕ್ಕೆ ಹೆಚ್ಚಿನ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸಂಜೆ 4.30ರಿಂದ 6 ಗಂಟೆಯವರೆಗೆ ರಾಹುಕಾಲವಿತ್ತು. ಈ ಅವಧಿಯಲ್ಲೇ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿತು. ಯಾವುದೇ ಕೆಲಸವನ್ನು ರಾಹುಕಾಲದಲ್ಲಿ ಆರಂಭಿಸಬಾರದು ಎಂದು ಶಾಸ್ತ್ರಗಳು ಹೇಳುವುದರಿಂದ ರಾಹುಕಾಲವನ್ನು ತಪ್ಪಿಸಿ ಬೇರೆ ಅವಧಿಯಲ್ಲಿ ಪತ್ರಿಕಾಗೋಷ್ಠಿ ನಡೆಸಬಹುದಿತ್ತು ಎಂಬ ಮಾತುಗಳು ಕೇಳಿಬಂದವು.
ಈ ಪತ್ರಿಕಾಗೋಷ್ಠಿಗೂ ಮುಂಚೆಯೇ ದಕ್ಷಿಣದ ಕೆಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯ ಸಮಯವನ್ನು ಬದಲಿಸಬೇಕೆಂದು ಆಗ್ರಹಿಸಿದ್ದವು. ಅದಕ್ಕೆ ಚುನಾವಣಾ ಆಯೋಗ ಸೊಪ್ಪು ಹಾಕಿಲ್ಲ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 11, 2019, 10:58 AM IST