ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ 8 ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ.
ನವದೆಹಲಿ(ಅ.08): ಡೀಸೆಲ್ ಬೆಲೆ ಇಳಿಕೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸೋಮವಾರ (ಅ.9-10)ದಿಂದ ಎರಡು ದಿನ ಮುಷ್ಕರ ನಡೆಸಲಿದ್ದಾರೆ. ದೇಶಾದ್ಯಂತ ಒಂದೇ ದರದ ಡೀಸೆಲ್ ಸಿಗುವಂತಾಗಲು, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದು ಸೇರಿದಂತೆ, ಇತರ ಕೆಲವು ವಿಷಯಗಳಿಗೂ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.
ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ), ಅಖಿಲ ಭಾರತ ಸಾಗಾಟಗಾರರ ಅಭಿವೃದ್ಧಿ ಸಂಸ್ಥೆ ಮತ್ತು ಸರಕು ವಾಹನ ಮಾಲೀಕರ ಸಂಘಗಳ ಅಖಿಲ ಭಾರತ ಒಕ್ಕೂಟ ಪತ್ರಿಕಾಗೋಷ್ಠಿ ನಡೆಸಿ, ಪ್ರತಿಭಟನೆಯ ಕುರಿತು ಘೋಷಿಸಿವೆ.
ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ 8 ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಧನಾತ್ಮಕವಾಗಿ ಪ್ರತಿಕ್ರಿಯಿಸದಿದ್ದಲ್ಲಿ, ದೀಪಾವಳಿ ನಂತರ ಅನಿರ್ಧಿಷ್ಠಾವಧಿ ‘ರಸ್ತೆ ತಡೆ’ ನಡೆಸಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.
