ನಾಗನಹಳ್ಳಿ ದೊಡ್ಡೆಗೌಡನಕೊಪ್ಪಲು ಗ್ರಾಮದ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಡಿ.ಎಲ್.ವೀಣಾ, ಕೆಳಗನಹಳ್ಳಿ ದೊಡ್ಡಕೊಪ್ಪಲು ನಿವಾಸಿ ಕೆ.ಎನ್.ಸ್ವಾಮಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಮೈಸೂರು[ನ.27]: ಪ್ರೇಮಿಗಳಿಬ್ಬರು ಟಿಬೇಟಿಯನ್ ಬಾವುಟಗಳನ್ನು ಕಟ್ಟುವ ಹಗ್ಗದಿಂದ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಗರದ ಪಿರಿಯಾಪಟ್ಟಣ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ನಾಗನಹಳ್ಳಿ ದೊಡ್ಡೆಗೌಡನಕೊಪ್ಪಲು ಗ್ರಾಮದ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಡಿ.ಎಲ್.ವೀಣಾ, ಕೆಳಗನಹಳ್ಳಿ ದೊಡ್ಡಕೊಪ್ಪಲು ನಿವಾಸಿ ಕೆ.ಎನ್.ಸ್ವಾಮಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಸಿಡಿಲು ಮಲ್ಲಿಕಾರ್ಜುನ ಬೆಟ್ಟದ ವೀರಭದ್ರನ ಗುಡಿಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಾವಿಗೆ ಕಾರಣವೇನು ಎಂದು ಸ್ಪಷ್ಟವಾಗಿಲ್ಲ. 

ಪ್ರೇಮಿಗಳಿಬ್ಬರು ತಮ್ಮ ಸಾವಿಗೆ ತಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.