ಕಣ್ಣೀರು ಹಾಕಿದ ಜೆಡಿಎಸ್ ಅಭ್ಯರ್ಥಿ
ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.
ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಪ್ರಚಾರ ಭಾಷಣದ ಸಂದರ್ಭದಲ್ಲಿ ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.
ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ.
ಆದರೂ ನನ್ನನ್ನು ಅಪರಾಧಿ, ಅಪರಾಧ ಮಾಡಿದ್ದೇನೆಂದು ಬೆಂಬಿಸಲಾಗುತ್ತಿದೆ. ಯಾವುದೇ ತಪ್ಪು ಮಾಡದಿದ್ದರೂ ನನಗೆ ಅಧಿಕಾರ ಸಿಗಲಿಲ್ಲ ಎಂದು ಗೋಳೋ ಅತ್ತರು.