ನವದೆಹಲಿ (ಸೆ.17): ಫಿನ್’ಲ್ಯಾಂಡ್ ಪ್ರವಾಸದಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಕೂಡಲೇ ದೆಹಲಿಗೆ ವಾಪಸಾಗುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯಲ್ಲಿ ಸಾಂಕ್ರಾಮಿಕ ರೋಗಗಳು ಮಿತಿ ಮೀರಿವೆ. ಡೆಂಘೀ ಹಾಗೂ ಚಿಕುನ್ ಗೂನ್ಯಾದಿಂದ ಜನ ತತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಯಿಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಾದ ಸಿಎಂ ಅನಾರೋಗ್ಯ ನಿಮಿತ್ತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇವರ ಅನುಪಸ್ಥಿತಿಯಲ್ಲಿ ಜವಾಬ್ದಾರಿ ನಿಭಾಯಿಸಬೇಕಾದವರು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ. ಆದರೆ ಮನೀಶ್ ಫಿನ್ ಲ್ಯಾಂಡ್ ಶಿಕ್ಷಣ ವ್ಯವಸ್ಥೆಯ ಕುರಿತ ಅಧ್ಯಯನಕ್ಕಾಗಿ ಫಿನ್​ಲ್ಯಾಂಡ್​ಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಮನೀಶ್ ಸಿಸೋಡಿಯಾ ದೆಹಲಿಗೆ ವಾಪಸಾಗುವಂತೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೂಚಿಸಿದ್ದಾರೆ.