Asianet Suvarna News Asianet Suvarna News

ಕಾಂಗ್ರೆಸ್ ಸರ್ಕಾರಕ್ಕೆ ನಡುಕ : ಹೈ ಅಲರ್ಟ್

ಕರ್ನಾಟಕದಲ್ಲಿ ರಾಜಕೀಯ ಹೈ ಡ್ರಾಮಾ ಬೆನ್ನಲ್ಲೇ ಇಲ್ಲೊಂದು ಕೈ ನೇತೃತ್ವದ ಸರ್ಕಾರಕ್ಕೂ ನಡುವ ಶುರುವಾಗಿದ್ದು, ನಾಯಕರು ಆತಂಕದಲ್ಲಿದ್ದಾರೆ.

Madhya Pradesh Congress High Alert Over Political Crisis
Author
Bengaluru, First Published Jul 11, 2019, 8:56 AM IST

ಭೋಪಾಲ್‌ [ಜು.11]: ಕರ್ನಾಟಕ ಮತ್ತು ಗೋವಾ ಸರ್ಕಾರದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳು ನೆರೆಯ ಮಧ್ಯಪ್ರದೇಶ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತಷ್ಟು ನಡುಕ ಹುಟ್ಟುಹಾಕಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರ ಕೈತಪ್ಪಬಾರದು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಕಾಂಗ್ರೆಸ್‌ ಶಾಸಕರು ಸೇರಿದಂತೆ, ಸರ್ಕಾರಕ್ಕೆ ಬೆಂಬಲ ನೀಡಿರುವ ಮೈತ್ರಿ ಪಕ್ಷಗಳ ಶಾಸಕರ ಜೊತೆಗೂ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನ ಬುಧವಾರ ಆರಂಭವಾಗಿದೆ. ಶೀಘ್ರವೇ ಹಣಕಾಸು ಮಸೂದೆಗೆ ಅನುಮೋದನೆ ಪಡೆದುಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಒಂದು ವೇಳೆ ಹಣಕಾಸು ಮಸೂದೆಯ ವೇಳೆ ಶಾಸಕರ ಕೊರತೆ ಬಿದ್ದರೆ, ವಿಪಕ್ಷಗಳು ಮಸೂದೆಯನ್ನು ಮತಕ್ಕೆ ಹಾಕಲು ಕೋರುವ ಸಾಧ್ಯತೆ ಇದೆ. ಒಂದು ವೇಳೆ ಹಾಗೇನಾದರೂ ಆಗಿ ಹಣಕಾಸು ಮಸೂದೆಗೆ ಸೋಲಾದರೆ ಸಿಎಂ ರಾಜೀನಾಮೆ ನೀಡುವುದು ಅನಿವಾರ್ಯವಾಗುತ್ತದೆ. ಹೀಗಾಗಿ ಹಣಕಾಸು ಮಸೂದೆ ಸೇರಿದಂತೆ ಪ್ರಮುಖ ಮಸೂದೆಗಳು ಅಂಗೀಕಾರವಾಗುವವರೆಗೂ ರಾಜಧಾನಿ ಬಿಟ್ಟು ತೆರಳಬೇಡಿ ಎಂದು ಆಡಳಿತಾರೂಢ ಕಾಂಗ್ರೆಸ್‌ ಮತ್ತು ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಎಸ್‌ಪಿ, ಕಾಂಗ್ರೆಸ್‌ ಮತ್ತು ಪಕ್ಷೇತರ ಸದಸ್ಯರಿಗೆ ಕಮಲ್‌ನಾಥ್‌ ಸೂಚಿಸಿದ್ದಾರೆ.

230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರ ಬೆಂಬಲ ಅಗತ್ಯವಿದೆ. 114 ಸ್ಥಾನ ಗಳಿಸಿರುವ ಕಾಂಗ್ರೆಸ್‌ ಬಿಎಸ್‌ಪಿಯ ಇಬ್ಬರು, ಸಮಾಜವಾದಿ ಪಕ್ಷದ ಒಬ್ಬ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. 109 ಸ್ಥಾನಗಳಿಸಿರುವ ಬಿಜೆಪಿ ವಿಪಕ್ಷ ಸ್ಥಾನದಲ್ಲಿದೆ.

Follow Us:
Download App:
  • android
  • ios