ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾದಿಗ ಸಮುದಾಯದ ಬೆಂಗಳೂರಿನಲ್ಲಿ  ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು (ಡಿ.11): ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾದಿಗ ಸಮುದಾಯದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

Add Asianetnews Kannada as a Preferred SourcegooglePreferred

ಕೂಡಲ ಸಂಗಮದಿಂದ 550 ಕಿ.ಮೀ ಕಾಲ್ನಡಿಗೆಯಲ್ಲಿ ಬಂದಿರುವ ಕಾರ್ಯಕರ್ತರು ಬೆಂಗಳೂರನ್ನು ತಲುಪಿದ್ದು ಆನಂದ್ ರಾವ್ ಸರ್ಕಲ್'ನಲ್ಲಿ ಧರಣಿ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಬೇಕೆಂದು ಕಾರ್ಯಕರ್ತರ ಪಟ್ಟು ಹಿಡಿದಿದ್ದಾರೆ. ಇವರ ಪ್ರತಿಭಟನೆಯಿಂದ ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್​ ಉಂಟಾಗಿದೆ.