ಸಾವಿನ ಕುರಿತಂತೆ ಎಐಎಡಿಎಂಕೆ ಕಾರ್ಯಕರ್ತ ಜೋಸೆಫ್ ಎಂಬುವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

ಚೆನ್ನೈ(ಡಿ.29): ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಮದ್ರಾಸ್ ಹೈಕೋರ್ಟ್ ಅನುಮಾನ ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಗೆ ಯಾಕೆ ಆದೇಶ ಮಾಡಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಪ್ರಶ್ನಿಸಿದೆ. ಹೈಕೋರ್ಟ್'ನ ನ್ಯಾಯಾಧೀಶರಾದ ವೈದ್ಯನಾಥನ್ ಅನುಮಾನ ವ್ಯಕ್ತಪಡಿಸಿ, ಜಯಾ ಚಿಕಿತ್ಸೆಯ ಕುರಿತ ಮಾಹಿತಿ ಗೌಪ್ಯವಾಗಿಟ್ಟಿದ್ದೇಕೆ? ಈ ಬಗ್ಗೆ ಕೇಂದ್ರ ಸರ್ಕಾರ ಕೂಡ ಮೌನವಹಿಸಿದೆ.ಕೆಲವು ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿದೆ. ಆದ್ದರಿಂದ ಜಯಾ ಸಾವಿನ ಕುರಿತಂತೆ ನನಗೂ ಅನುಮಾನ ವ್ಯಕ್ತವಾಗಿದೆ ಎಂದು ಸರ್ಕಾರನ್ನು ಪ್ರಶ್ನಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಾವಿನ ಕುರಿತಂತೆ ಎಐಎಡಿಎಂಕೆ ಕಾರ್ಯಕರ್ತ ಜೋಸೆಫ್ ಎಂಬುವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

 ಜಯಾ ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದವು.ತಮಿಳು ಚಿತ್ರನಟಿ ಗೌತಮಿ ಕೂಡ ಜಯಾ ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.