Asianet Suvarna News Asianet Suvarna News

ಮಹದಾಯಿ : ರೈತರಿಂದ ನರಗುಂದ ಬಂದ್‌

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು ನರಗುಂದ ಬಂದ್ ಗೆ ನಡೆಸಲಾಗುತ್ತಿದೆ. 

Mahadayi issue Farmers Call For Nargund Bandh
Author
Bengaluru, First Published Jul 16, 2019, 9:02 AM IST

ನರಗುಂದ [ಜು.16]: ಕಳಸಾ, ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಟ್ಟಸಂದರ್ಭದಲ್ಲಿ ಮಂಗಳವಾರ ಜು.16 ರಂದು ರೈತ ಸೇನಾ ಕರ್ನಾಟಕ ಹಾಗೂ ಮತ್ತಿತರ ಸಂಘಟನೆಗಳು ನರಗುಂದ ತಾಲೂಕು ಬಂದ್‌ಗೆ ಕರೆ ನೀಡಿವೆ. ಸರ್ಕಾರದ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಯಾಗುತ್ತಿಲ್ಲ. ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಹಾಗೂ ನ್ಯಾಯಾಧಿಕರಣದ ತೀರ್ಪನ್ನು ಪ್ರಾಮಾಣಿಕವಾಗಿ ಜಾರಿಗೆ ತರುವಲ್ಲಿ ಸಹ ವಿಫಲವಾಗಿದೆ ಎಂದು ಆರೋಪಿಸಿ ಬಂದ್‌ಗೆ ಕರೆ ನೀಡಲಾಗಿದೆ.

ಮಂಗಳವಾರ ಮುಂಜಾನೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯ ವರೆಗೆ ನರಗುಂದ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಕಳಸಾ ಬಂಡೂರಿ ಹಳ್ಳದಿಂದ ಮಲಪ್ರಭಾ ಜಲಾಶಯಕ್ಕೆ 13.42 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ನ್ಯಾಯಾಧಿಕರಣ ಅನುಮತಿ ನೀಡಿ ಹಲವಾರು ತಿಂಗಳುಗಳೇ ಗತಿಸಿದ್ದರೂ ಕೇಂದ್ರ ಸರ್ಕಾರ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲು ಮುಂದಾಗುತ್ತಿಲ್ಲ. 

ಕೇಂದ್ರ ಸರ್ಕಾರದ ಈ ಧೋರಣೆ ಖಂಡಿಸಿ ಬಂದ್‌ ಕರೆ ನೀಡಲಾಗಿದೆ ಎಂದು ರೈತ ಸೇನಾದ ಕೋಶಾಧ್ಯಕ್ಷ ಎಸ್‌.ಬಿ.ಜೋಗಣ್ಣವರ ಪ್ರಕಟಣೆಯಲ್ಲಿ ಹೇಳಿದ್ದಾರೆ.

Follow Us:
Download App:
  • android
  • ios