ಮಹದಾಯಿ ವಿಚಾರವಾಗಿ ಕರ್ನಾಟಕದ ವಿರುದ್ಧ ಹರಿಹಾಯ್ದ ಗೋವಾ ಸಚಿವ ವಿನೋದ್ ಪಾಲೇಂಕರ್ ತನ್ನ ತಪ್ಪಿನ ಅರಿವಾದಕ್ಷಣವೇ ಹೇಳಿಕೆ ಹಿಂದೆ

ಪಣಜಿ: ಮಹದಾಯಿ ವಿಚಾರವಾಗಿ ಕರ್ನಾಟಕದ ವಿರುದ್ಧ ಹರಿಹಾಯ್ದಿರುವ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಂಕರ್, ಕನ್ನಡಿಗರನ್ನು ‘ಹರಾಮಿ’ಗಳೆಂದು ಕರೆದಿದ್ದಾರೆ. ಬಳಿಕ ತನ್ನ ತಪ್ಪಿನ ಅರಿವಾದಕ್ಷಣವೇ ಹೇಳಿಕೆಯನ್ನು ಹಿಂಪಡೆದಿದ್ದಾರೆ.

Add Asianetnews Kannada as a Preferred SourcegooglePreferred

ಉತ್ತರ ಕರ್ನಾಟಕದ ಕಂಕುಂಬಿ ಪ್ರದೇಶಲ್ಲಿ ಮಹದಾಯಿ ನೀರು ತಿರುಗಿಸುವ ಸ್ಥಳಕ್ಕೆ ಶನಿವಾರ ಪೊಲೀಸ್ ಭದ್ರತೆಯೊಂದಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಪಾಲೇಂಕರ್, ‘ಇವರು ಹರಾಮಿಗಳು, ಏನು ಬೇಕಾದರೂ ಮಾಡಬಹುದು’ ಎಂದಿದ್ದಾರೆ.

ತಪ್ಪಿನ ಅರಿವಾಗುತ್ತಿದ್ದಂತೆ, ಭಾವಾವೇಶದಲ್ಲಿ ಆ ಪದ ಬಳಸಿರುವುದಾಗಿಯೂ, ಅದನ್ನು ನಿರ್ಲಕ್ಷಿಸಲು ಮನವಿ ಮಾಡಿಕೊಂಡಿದ್ದಾರೆ.

ಮಹದಾಯಿ ವಿಚಾರದಲ್ಲಿ ಕರ್ನಾಟಕ ಚಿಲ್ಲರೆ ರಾಜಕೀಯ ಮಾಡುತ್ತಿದೆ. ನಾವು ಮಾನವೀಯ ನೆಲೆಯಲ್ಲಿ ಕುಡಿಯಲು ನೀರು ಕೊಡುವುದಾಗಿ ಯಡಿಯೂರಪ್ಪರಿಗೆ ಪತ್ರ ಬರೆದಿದ್ದರೂ ಅದನ್ನು ಸರ್ಕಾರ ಪರಿಗಣಿಸುತ್ತಿಲ್ಲವೆಂದು ಹರಿಹಾಯ್ದಿದ್ದಾರೆ.