ನರೇಂದ್ರ ಮೋದಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಖರ್ಗೆ..!
ನರೇಂದ್ರ ಮೋದಿ ಸರ್ಕಾರವನ್ನ ಕಾಂಗ್ರೆಸ್ನ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಏನದು? ಇಲ್ಲಿದೆ ಡಿಟೇಲ್ಸ್
ನವದೆಹಲಿ, (ನ.3): ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅಧಿಕಾರವಧಿಯಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕೇಂದ್ರ ಸರ್ಕಾರ ಹಾಗೂ ಸಿಬಿಐ ನಡುವಿನ ತಿಕ್ಕಾಟ ಸಂಬಂಧ ಕಾಂಗ್ರೆಸ್ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?
ಸಿಬಿಐ ಮುಖ್ಯಸ್ಥರ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಬಾಹೀರವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.
ಸಿಬಿಐ ರಂಪಾಟ: ವಿಪಕ್ಷಗಳಿಂದ ಭಾರೀ ಪ್ರತಿಭಟನೆ!
ಸಿಬಿಐ ಒಂದು ಸ್ವಾಯತ್ತ ತನಿಖಾ ಸಂಸ್ಥೆಯಾಗಿದೆ. ಆ ಸಂಸ್ಥೆಯ ನಿರ್ದೇಶಕರ ಅಧಿಕಾರಾವಧಿಯಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಕೇಂದ್ರೀಯ ವಿಚಕ್ಷಣ ಸಮಿತಿ (ಸಿವಿಸಿ)ಗೆ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ.
ಅಲೋಕ್ ವರ್ಮಾರ ಅಧಿಕಾರದ ಅವಧಿ ಇನ್ನೂ 2 ವರ್ಷ ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನ ಮನೆಗೆ ಕಳುಹಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.