ಪತ್ನಿಯ ಹತ್ಯೆ ಮಾಡಿದ ಪತಿ ಮನನೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ : ಪತ್ನಿಯ ಹತ್ಯೆ ಮಾಡಿದ ಪತಿ ಮನನೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನಿನ್ನೆ ಪತ್ನಿ ರೇಷ್ಮಾ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದ ಪತಿ ಚಂದ್ರಕಾಂತ್ ಸ್ಥಳದಿಂದ ಪರಾರಿಯಾಗಿದ್ದ. ಪತ್ನಿಯನ್ನು ಹತ್ಯೆ ಮಾಡಿದ್ದಕ್ಕೆ ಮನನೊಂದು ಇಂದು ವಿಷ ಸೇವಿಸಿ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.