ಆರು ತಿಂಗಳಿನಿಂದ ಮಾಸಾಶನ ನೀಡಿಲ್ಲವೆಂದು ಅಂಗವಿಕಲ ವ್ಯಕ್ತಿಯೊಬ್ಬರು ಕೊರಳಲ್ಲಿ ಹಾವು ಹಾಕಿ ಕೊಂಡು ಗುರುವಾರ ಪಟ್ಟ ಣಾದ್ಯಂತ ಸಂಚರಿಸುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.

ರೋಣ: ಆರು ತಿಂಗಳಿನಿಂದ ಮಾಸಾಶನ ನೀಡಿಲ್ಲವೆಂದು ಅಂಗವಿಕಲ ವ್ಯಕ್ತಿಯೊಬ್ಬರು ಕೊರಳಲ್ಲಿ ಹಾವು ಹಾಕಿ ಕೊಂಡು ಗುರುವಾರ ಪಟ್ಟ ಣಾದ್ಯಂತ ಸಂಚರಿಸುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು. ಪಟ್ಟಣದ ಕಲ್ಯಾಣ ನಗರದ ನಿವಾಸಿ ವಿಕಲಚೇತನ ಮಕ್ತುಂಸಾಬ್ ರಾಜಾಖಾನ್ ಎಂಬಾತ ಮನೆಯೊಂದರ ಅಡಿಪಾಯ ತೆಗೆಯುತ್ತಿದ್ದಾಗ ಸಿಕ್ಕ ಹಾವನ್ನು ಹಿಡಿದು ಕೊರಳಲ್ಲಿ ಪಟ್ಟಣದಲ್ಲಿ ಸುತ್ತಾಡಿದ್ದಾನೆ. 

Add Asianetnews Kannada as a Preferred SourcegooglePreferred

ಹಾವನ್ನು ಕೊರಳಿನಿಂದ ತೆಗೆಯುವಂತೆ ಜನರು ಹೇಳಿದರು ಆತ ತೆಗೆದಿಲ್ಲ. ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾನೆ. ಕುಡಿದ ನಶೆಯಲ್ಲಿ ಈ ರೀತಿ ವರ್ತಿಸಿದ್ದು, ಜತೆಗೆ ಕುಷ್ಠರೋಗ ಇದ್ದವರಿಗೆ ಹಾವು ಕಚ್ಚುವುದಿಲ್ಲ ಎಂದು ತಿಳಿದು ಈ ರೀತಿಯಾಗಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಕನ್ನಡಪ್ರಭದೊಂದಿಗೆ ಮಾತನಾಡಿದ ತಹಸೀಲ್ದಾರ್ ಶಿವಲಿಂಗಪ್ರಭು ವಾಲಿ, ಕೊರಳನಲ್ಲಿ ಹಾವು ಹಾಕಿಕೊಂಡು ನನ್ನ ಬಳಿ ಯಾವ ವ್ಯಕ್ತಿಯೂ ಬಂದಿಲ್ಲ. ಮಾಸಾಶನ ವಿಳಂಬದಿಂದ ಈ ರೀತಿಯಾಗಿ ಮಾಡಿದ್ದಾನೆ ಎಂದರೆ ಪರಿಶೀಲಿಸುವೆ ಎಂದರು.