ಮಂಡಸೌರ್ : ಕಾಂಗ್ರೆಸ್ ನಾಯಕ ಸಿಂಧಿಯಾ ಬಂಧನ
ಮಧ್ಯಪ್ರದೇಶದ ಮಂಡಸೌರ್ನಲ್ಲಿ ನಡೆದ ಗೋಲಿಬಾರ್ ಘಟನೆ ಮತ್ತೊಂದು ಸಂಘರ್ಷದ ಬೆಳವಣಿಗೆಗೆ ವೇದಿಕೆಯಾಗಿದೆ.
ಭೋಪಾಲ್ : ಮಧ್ಯಪ್ರದೇಶದ ಮಂಡಸೌರ್ನಲ್ಲಿ ನಡೆದ ಗೋಲಿಬಾರ್ ಘಟನೆ ಮತ್ತೊಂದು ಸಂಘರ್ಷದ ಬೆಳವಣಿಗೆಗೆ ವೇದಿಕೆಯಾಗಿದೆ.
ಗೋಲಿಬಾರ್ನಲ್ಲಿ ಮೃತಪಟ್ಟಿದ್ದ ರೈತ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ನನ್ನು ಬೆಳಗ್ಗೆ ಪೊಲೀಸರು ಬಂಧಿಸಿದ್ದರು. ಇದೀಗ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾಗೂ ಮಂಡ್ಸೌರ್ ಪ್ರವೇಶಕ್ಕೆ ತಡೆ ನೀಡಲಾಗಿದೆ.
ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಲು ಅವಕಾಶ ನೀಡದ ಪೊಲೀಸರು, ಸಂಸದ ಸಿಂಧಿಯಾರನ್ನು ಬಂಧಿಸಿದ್ದಾರೆ. ಮಂಡಸೌರ್ನಲ್ಲಿ ಆಕ್ರೋಶದ ಕಿಚ್ಚು ಕಾವೇರಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರತಿಭಟನೆ ತೀವ್ರಗೊಂಡಿದೆ.