ಮಂಡ್ಯ(ಸೆ.11): ಮಂಡ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಮತ್ತೊಬ್ಬ ರೈತ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. 

Add Asianetnews Kannada as a Preferred SourcegooglePreferred

ಪಾಂಡವಪುರ ತಾಲೂಕಿನ ಜವರೇಗೌಡ ಕೊಪ್ಪಲು ಗ್ರಾಮದ ಮಾದೇಗೌಡ(50) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ವಿವಿಧ ಬ್ಯಾಂಕಿನಲ್ಲಿ ಒಟ್ಟು 3.5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. 

ಒಂದು ಕಡೆ ಸಾಲ ಮಾಡಿ 3 ಬೋರ್ ವೆಲ್‌ಗಳನ್ನು ಕೊರೆಸಿದ್ದ ಮಾದೇಗೌಡ, ಆದರೆ ನೀರು ಬರದೆ ನಷ್ಟ ಅನುಭವಿಸಿದ್ದರು. ಅದಲ್ಲದೇ ಜಮೀನಿಗೆ ಹರಿಯುತ್ತಿದ್ದ ಕಾವೇರಿ ನೀರನ್ನು ಸಹ ನಿಲ್ಲಿಸಿದ್ದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಸ್ಥಳಕ್ಕೆ ಸಂಸದ ಸಿ.ಎಸ್.ಪುಟ್ಟರಾಜು, ಜಿಲ್ಲಾಧಿಕಾರಿ, ತಹಶೀಲ್ದಾರ್ ಭೇಟಿ ನೀಡಿದ್ದಾರೆ, ಈ ಸಂದರ್ಭದಲ್ಲಿ ಮೃತ ರೈತ ಕುಟುಂಬಕ್ಕೆ ಜಿಲ್ಲಾಡಳಿತ 5 ಲಕ್ಷ ರೂಪಾಯಿ ನೀಡುವಂತೆ ಸಿ.ಎಸ್,ಪುಟ್ಟರಾಜು ಆಗ್ರಹಿಸಿದ್ದಾರೆ. ಇದಲ್ಲದೇ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಂಸದರು ಮನವಿ ಮಾಡಿದ್ದಾರೆ.