ತುಮಕೂರಿನಲ್ಲಿ ಪ್ರಾರಂಭ | ಎಚ್‌ಡಿಕೆ ಸರ್ಕಾರದ ಸಾಧನೆ ಜನರಿಗೆ ಮನವರಿಕೆ: ಗೌಡ

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಬೆಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ಚಾಲನೆ ನೀಡಿದ್ದ ‘ಮನೆ ಮನೆಗೆ ಕುಮಾರಣ್ಣ’ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತುಮಕೂರಿನಲ್ಲಿ ಈ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.

ಸಿದ್ಧಗಂಗಾ ಮಠದ ಆವರಣದಲ್ಲಿ ಜೆಡಿಎಸ್ ಘಟಕ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ ನೇತೃತ್ವದ 20 ತಿಂಗಳ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳು ಮತ್ತು ಮುಂದೆ ನೀಡಬಹುದಾದ ಕಾರ್ಯಕ್ರಮಗಳ ಕುರಿತು ಮತದಾರರಿಗೆ ಈ ಕಾರ್ಯಕ್ರಮದ ಮೂಲಕ ಮನವರಿಕೆ ಮಾಡಿಕೊಡಬೇಕು.

ಜತೆಗೆ, ಇನ್ನು ಆರು ತಿಂಗಳು ಮುಖಂಡರು, ಕಾರ್ಯಕರ್ತರು ಹಗಲಿರುಳೆನ್ನದೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಈಗಾಗಲೇ ಪ್ರಚಾರ ಚುರುಕುಗೊಳಿಸಿದ್ದು, ಇದಕ್ಕೆ ಸಡ್ಡು ಹೊಡೆಯಲು ಜೆಡಿಎಸ್ ಈಗ ‘ಮನೆ ಮನೆಗೆ ಕುಮಾರಣ್ಣ ’ ಮೂಲಕ ಮತದಾರರ ತಲುಪಲು ಮುಂದಾಗಿದೆ