ನಡಹಳ್ಳಿ ವಿರುದ್ಧ ಜೆಡಿಎಸ್ನಿಂದ ಮಂಗಳಾ ಕಣಕ್ಕೆ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ ಕಾರಣಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಗಳಾದೇವಿ ಬಿರಾದಾರ ಬಂಡೆದ್ದಿದ್ದಾರೆ.
ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ ಕಾರಣಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಗಳಾದೇವಿ ಬಿರಾದಾರ ಬಂಡೆದ್ದಿದ್ದಾರೆ.
ಅವರು ಬುಧವಾರ ಜೆಡಿಎಸ್ ಸೇರ್ಪಡೆಯಾಗಿದ್ದು, ಮುದ್ದೇಬಿಹಾಳದಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಜೆಡಿಎಸ್ನಿಂದ ವಲಸೆ ಬಂದ ಎ.ಎಸ್.ಪಾಟೀಲ ನಡಹಳ್ಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದರಿಂದ ಮಂಗಳಾದೇವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.