ಮನಮೋಹನ್‌ ಸಿಂಗ್‌ ರಾಜಸ್ಥಾನದಿಂದ ರಾಜ್ಯಸಭೆಗೆ| ಆ.13ಕ್ಕೆ ನಾಮಪತ್ರ|  ರಾಜ್ಯಸಭೆ ಸದಸ್ಯರಾಗಿದ್ದ ಬಿಜೆಪಿಯ ಮದನ್‌ಲಾಲ್‌ ಸೈನಿ ಅವರ ನಿಧನದಿಂದ ತೆರವಾದ ಸ್ಥಾನ

ನವದೆಹಲಿ[ಆ.11]: ಮಾಜಿ ಪ್ರಧಾನಿ, ಕಾಂಗ್ರೆಸ್‌ ಹಿರಿಯ ನಾಯಕ ಮನಮೋಹನ್‌ ಸಿಂಗ್‌ ಅವರು ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶ ಮಾಡುವುದು ಖಚಿತವಾಗಿದ್ದು, ಆ.13ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಸಭೆ ಸದಸ್ಯರಾಗಿದ್ದ ಬಿಜೆಪಿಯ ಮದನ್‌ಲಾಲ್‌ ಸೈನಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಚುನಾವಣೆ ಆಯೋಜನೆಗೊಂಡಿದೆ.

ಮನಮೋಹನ್‌ ಸಿಂಗ್‌ ಅವರು 28 ವರ್ಷಗಳಿಂದ ಅಸ್ಸಾಂ ಮೂಲಕ ರಾಜ್ಯಸಭೆ ಪ್ರತಿನಿಧಿಸುತ್ತಿದ್ದರು. ಈ ವರ್ಷದ ಆರಂಭದಲ್ಲಿ ಅವರ ರಾಜ್ಯಸಭೆ ಅವಧಿ ಮುಗಿದಿತ್ತು. ಆದರೆ ಅಸ್ಸಾಂನಿಂದ ಸಿಂಗ್‌ರನ್ನು ಆರಿಸುವಷ್ಟುಬಲ ಕಾಂಗ್ರೆಸ್‌ಗೆ ಇಲ್ಲದ ಕಾರಣ ಅವರು ಅಲ್ಲಿ ಕಣಕ್ಕೆ ಇಳಿದಿರಲಿಲ್ಲ.