ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯುವ ಸಲುವಾಗಿ ಪದ್ಮಾವತಿ ಚಿತ್ರವನ್ನು ಬಿಡುಗಡೆ ಮಾಡಲೇಬೇಕು ಎಂದು ಛತ್ತೀಸ್’ಗಢದಲ್ಲಿ ಮಾವೋವಾದಿಗಳು ಭಾನುವಾರ ಆಗ್ರಹಿಸಿದ್ದಾರೆ.

ರಾಯ್ಪುರ(ಡಿ.11): ರಜಪೂತ ಸಮುದಾಯದ ಕರಣಿ ಸೇನೆ ಮತ್ತು ಹಿಂದೂಪರ ಸಂಘಟನೆಗಳು ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದ ವಿವಾದಾತ್ಮಕ `ಪದ್ಮಾವತಿ' ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದರೆ, ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯುವ ಸಲುವಾಗಿ ಈ ಚಿತ್ರವನ್ನು ಬಿಡುಗಡೆ ಮಾಡಲೇಬೇಕು ಎಂದು ಛತ್ತೀಸ್’ಗಢದಲ್ಲಿ ಮಾವೋವಾದಿಗಳು ಭಾನುವಾರ ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಾಂತೇವಾಡ ಜಿಲ್ಲೆಯಲ್ಲಿನ ಕಾಡುಗಳಲ್ಲಿ ದೀಪಿಕಾ ಪಡುಕೋಣೆ ಅವರನ್ನು ಬೆಂಬಲಿಸುವ ಪೋಸ್ಟರ್ ಮತ್ತು ಪಾಂಪ್ಲೆಟ್’ಗಳನ್ನು ನಕ್ಸಲರು ಅಂಟಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.