ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು 500, 2000 ಸಾವಿರದ ಹೊಸ ನೋಟುಗಳ ಪ್ರತಿಯನ್ನು ಪ್ರದರ್ಶಿಸುತ್ತಾ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಗೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.

ಧಾರವಾಡ (ನ.26): ಕಪ್ಪು ಹಣದ ಕಡಿವಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ 500 ಮತ್ತು 1000 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವುದನ್ನು​ ಬೆಂಬಲಿಸಿ ಧಾರವಾಡದ ವಿವಿಧ ಸಂಘಟನೆಗಳು ಬೃಹತ್​ ಮೆರವಣಿಗೆ ನಡೆಸಿದವು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು 500, 2000 ಸಾವಿರದ ಹೊಸ ನೋಟುಗಳ ಪ್ರತಿಯನ್ನು ಪ್ರದರ್ಶಿಸುತ್ತಾ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಗೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.

ದಾರಿಯುದ್ದಕ್ಕೂ ಪ್ರಧಾನಿ ಮೋದಿ ಪರ ಘೋಷಣೆ ಕೂಗುತ್ತಾ ನೋಟುಗಳನ್ನು ಬ್ಯಾನ್​ ಮಾಡಿದ್ದು ಉತ್ತಮ ಬೆಳವಣಿಗೆ, ಪ್ರತಿಪಕ್ಷಗಳು ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಅಂತ ಆಕ್ಷೇಪ ವ್ಯಕ್ತಪಡಿಸಿದರು.