ಪ್ರತಿಯೊಂದು ಸೇವೆಗೂ ಆಧಾರ್ ಜೋಡಣೆ ಕುರಿತು ಸಾಕಷ್ಟು ಜೋಕ್‌ಗಳನ್ನು ಕೇಳಿರುತ್ತೀರಿ. ಆದರೆ, ಇಲ್ಲೊಂದು ಪಾರ್ಕ್‌ಗೆ ಪ್ರವೇಶ ಮಾಡಬೇಕಾದಲ್ಲಿ ವಿವಾಹ ದೃಢೀಕರಣ ಪತ್ರ ಬೇಕೆಂದು ಕೇಳುತ್ತಿರುವುದು, ಈಗ ವಿವಾದಕ್ಕೆ ಕಾರಣವಾಗಿದೆ.

ಕೊಯಮತ್ತೂರು: ಪ್ರತಿಯೊಂದು ಸೇವೆಗೂ ಆಧಾರ್ ಜೋಡಣೆ ಕುರಿತು ಸಾಕಷ್ಟು ಜೋಕ್‌ಗಳನ್ನು ಕೇಳಿರುತ್ತೀರಿ. ಆದರೆ, ಇಲ್ಲೊಂದು ಪಾರ್ಕ್‌ಗೆ ಪ್ರವೇಶ ಮಾಡಬೇಕಾದಲ್ಲಿ ವಿವಾಹ ದೃಢೀಕರಣ ಪತ್ರ ಬೇಕೆಂದು ಕೇಳುತ್ತಿರುವುದು, ಈಗ ವಿವಾದಕ್ಕೆ ಕಾರಣವಾಗಿದೆ. ಕೊಯಮತ್ತೂರಿನ ತಮಿಳುನಾಡು ಕೃಷಿ ವಿವಿಯ ಸಮೀಪದಲ್ಲಿರುವ ಪಾರ್ಕ್‌ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Add Asianetnews Kannada as a Preferred SourcegooglePreferred

ಪಾರ್ಕ್ ಆವರಣದಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ, ಜೋಡಿಗಳು ಅಸಭ್ಯವಾಗಿ ವರ್ತಿಸುತ್ತಿವೆ. ಹೀಗಾಗಿ ಇಲ್ಲಿಗೆ ವಿವಾಹಿತ ಜೋಡಿಗಳಿಗೆ ಮಾತ್ರ ಪ್ರವೇಶ ನೀಡುವ ನಿಯಮ ರೂಪಿಸಲಾಗಿದೆ. ಆರಂಭದಲ್ಲಿ ಗುರುತು ಚೀಟಿಗಳು ಮತ್ತು ಫೋನ್ ನಂಬರ್ ಸೇರಿದಂತೆ ವೈಯಕ್ತಿಕ ವಿವರಗಳನ್ನು ಕೇಳಿ ಪಾರ್ಕ್ ಒಳಗೆ ಬಿಡುವ ಕ್ರಮ ಜಾರಿಗೊಳಿಸಲಾಗಿತ್ತು. ಇದೆಲ್ಲದರ ಹೊರತಾಗಿಯೂ, ಜೋಡಿಗಳು ಅಸಭ್ಯ ವರ್ತನೆ ಮುಂದುವರೆದಿದೆ.

ಈ ಬಗ್ಗೆ ವಿದ್ಯಾರ್ಥಿಗಳು, ಕುಟುಂಬಗಳು ಹಲವು ಬಾರಿ ದೂರು ನೀಡಿವೆ. ಹೀಗಾಗಿ ಮದುವೆಯಾದವರಿಗೆ ಮಾತ್ರ ಪಾರ್ಕ್ ಒಳಗೆ ಪ್ರವೇಶ ನೀಡಲು ಪಾರ್ಕ್ ನಿರ್ವಹಣಾ ಮಂಡಳಿ ನಿರ್ಧರಿಸಿದೆ.