ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಾಗೇಕಾಡು ಮಗ್ಗೆ ಗ್ರಾಮದ ಮಹಮದ್ ಅಕ್ರಂ, ಜಾಂದಾಳ್ ಗ್ರಾಮದ ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದ.  ಅಲ್ಲದೇ ಅರೇಬಿಕ್​ ಭಾಷೆ ಶಿಕ್ಷಕನಾಗಿದ್ದನು.  ಎರಡು ದಿನದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿಯನ್ನು ಮೌಲ್ವಿ ಅಪಹರಿಸಿದ್ದು, ಮಗಳು ಮನೆಗೆ ಬಾರದ ಕಾರಣ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಹಾಸನ(ಡಿ.12): ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಮೌಲ್ವಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ. ಮಹಮದ್ ಅಕ್ರಂ ಬಂಧಿತ ಧರ್ಮದೇಟು ತಿಂದ ಆರೋಪಿ.

Add Asianetnews Kannada as a Preferred SourcegooglePreferred

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಾಗೇಕಾಡು ಮಗ್ಗೆ ಗ್ರಾಮದ ಮಹಮದ್ ಅಕ್ರಂ, ಜಾಂದಾಳ್ ಗ್ರಾಮದ ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದ. ಅಲ್ಲದೇ ಅರೇಬಿಕ್​ ಭಾಷೆ ಶಿಕ್ಷಕನಾಗಿದ್ದನು. ಎರಡು ದಿನದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿಯನ್ನು ಮೌಲ್ವಿ ಅಪಹರಿಸಿದ್ದು, ಮಗಳು ಮನೆಗೆ ಬಾರದ ಕಾರಣ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೊಳೆನರಸೀಪುರ ಪೊಲೀಸರು ಮಹಮದ್ ಅಕ್ರಂನ ಮೊಬೈಲ್ ಸಂಖ್ಯೆಯನ್ನು ಆಧರಿಸಿ ಭದ್ರಾವತಿಯ ಲಾಡ್ಜ್​ನಲ್ಲಿ ಇರುವುದನ್ನು ಪತ್ತೆಹಚ್ಚಿದ್ದರು. ಕೂಡಲೇ ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ಹೊಳೆನರಸೀಪುರ ಠಾಣೆಗೆ ಕರೆತಂದರು. ಈ ವೇಳೆ ಜಮಾಯಿಸಿದ್ದ ಸಾರ್ವಜನಿಕರು, ಮೌಲ್ವಿಗೆ ಧರ್ಮದೇಟು ನೀಡಿದರು.