ಕಾಂಗ್ರೆಸ್ ನಾಯಕ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅವರ ಬೆಂಬಲಿಗರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಬೆಂಗಳೂರು(ಜೂ.20) : ಕಾಂಗ್ರೆಸ್‌ನಿಂದ ಅಮಾನತುಗೊಂಡ ಮಾಜಿ ಸಚಿವ ರೋಷನ್ ಬೇಗ್ ಜತೆ ಗುರುತಿಸಿಕೊಂಡ ಬಿಬಿಎಂ ಪಿಯ ಇಬ್ಬರು ಸದಸ್ಯರ ಬಗ್ಗೆ ವರದಿ ನೀಡುವಂತೆ ಪಾಲಿಕೆ ಯ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್‌ಗೆ ಕೆಪಿ ಸಿಸಿ ಸೂಚಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡ ಮಾಜಿ ಸಚಿವ ಹಾಗೂ ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯ ಲ್ಲಿ ಜಯಮಹಲ್ ವಾರ್ಡ್‌ನ ಸದಸ್ಯ ಎಂ.ಕೆ. ಗುಣಶೇಖರ್ ಹಾಗೂ ಭಾರತಿನಗರ ವಾರ್ಡ್ ನ ಶಕೀಲ್ ಅಹಮದ್ ಅವರು ಪಾಲ್ಗೊಂಡಿದ್ದರು. 

ಪಕ್ಷ ಅಮಾನತು ಮಾಡಿರುವ ರೋಷನ್ ಬೇಗ್ ಜೊತೆಗೆ ಪಾಲಿಕೆ ಸದಸ್ಯರು ಕಾಣಿಸಿಕೊಳ್ಳುವುದಕ್ಕೆ ಕಾರಣ ಏನು ಎಂಬುರ ಬಗ್ಗೆ ಮಾಹಿತಿ ನೀಡುವಂತೆ ಕೆಪಿಸಿಸಿ ಸೂಚಿಸಿದೆ.