ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬಿಎಸ್ ಪಿ ನಾಯಕಿ ತಮ್ಮ ಪಕ್ಷದ 6 ನಾಯಕರಿಗೆ ಹುದ್ದೆಯಿಂದ ಗೇಟ್ ಪಾಸ್ ನೀಡಿದ್ದಾರೆ. ಯಾರು ನಾಯಕರು..? 

ಲಖನೌ: ಲೋಕಸಭಾ ಚುನಾವಣೆಯಲ್ಲಿನ ಬಿಎಸ್ಪಿಯ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಬಿಎಸ್ಪಿ ವರಿಷ್ಠೆ ಮಾಯಾವತಿ 6 ರಾಜ್ಯಗಳ ಉಸ್ತುವಾರಿ ಹಾಗೂ ಎರಡು ರಾಜ್ಯಗಳ ಪಕ್ಷದ ಅಧ್ಯಕ್ಷರನ್ನೇ ವಜಾಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಉತ್ತರಾಖಂಡ, ಬಿಹಾರ, ಜಾರ್ಖಂಡ್, ಒಡಿಶಾ, ಗುಜರಾತ್ ಮತ್ತು ರಾಜಸ್ಥಾನಗಳ ಉಸ್ತುವಾರಿಗಳನ್ನು ಬದಲಿಸಿದೆ.

ದೆಹಲಿ ರಾಜ್ಯಕ್ಕೆ ಲಕ್ಷ್ಮಣ ಸಿಂಗ್, ಮಧ್ಯಪ್ರದೇಶದಲ್ಲಿ ರಮಾಕಾಂತ್ ಪುಟ್ಟಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಜಯಭೇರಿ ಭಾರಿಸಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಕಳಪೆ ಸಾಧನೆಯಿಂದ ಕಂಗೆಟ್ಟ ಮಾಯಾ ನಾಯಕರಿಗೆ ಗೇಟ್ ಪಾಸ್ ನೀಡಿದ್ದಾರೆ.