ಸರ್ಕಾರದ ನೋಟು ನಿಷೇಧ ಕ್ರಮದಿಂದ ಬಡವರು, ಕಾರ್ಮಿಕರು ಹಾಗೂ ರೈತರು ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಅವಧಿಯಲ್ಲಿ ಸಂಗ್ರಹವಗಿರುವ ಹಣವನ್ನು ಸರ್ಕಾರ ಬಡವರ ಖಾತೆಗೆ ಜಮೆ ಮಾಡಬೇಕು ಹಾಗೂ ರೈತರ ಸಾಲಗಳನ್ನು ಮನ್ನಾಮಾಡಬೇಕು ಎಂದು ಮಾಯಾವತಿ ಆಗ್ರಹಿಸಿದ್ದಾರೆ.

ನವದೆಹಲಿ (ಡಿ.15): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ಕಳೆದ 37 ದಿನಗಳಲ್ಲಿ ಸಂಗ್ರಹವಾಗಿರುವ ಕಪ್ಪುಹಣವನ್ನು ಬಡವರ ಖಾತೆಗೆ ಜಮೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ಸರ್ಕಾರದ ನೋಟು ನಿಷೇಧ ಕ್ರಮದಿಂದ ಬಡವರು, ಕಾರ್ಮಿಕರು ಹಾಗೂ ರೈತರು ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಅವಧಿಯಲ್ಲಿ ಸಂಗ್ರಹವಗಿರುವ ಹಣವನ್ನು ಸರ್ಕಾರ ಬಡವರ ಖಾತೆಗೆ ಜಮೆ ಮಾಡಬೇಕು ಹಾಗೂ ರೈತರ ಸಾಲಗಳನ್ನು ಮನ್ನಾಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮೋದಿ ಸರ್ಕಾರವು ನೋಟು ಅಮಾನ್ಯ ಕ್ರಮವನ್ನು ಕೈಗೊಂಡಿದೆ, ಆದರೆ ಈ ಕ್ರಮ ಬಿಜೆಪಿಗೆ ತಿರುಗುಬಾಣವಾಗಿ ಪರಿಣಮಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.