ಕುಲಭೂಷಣ್‌ ಜಾಧವ್‌ ಪರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿದ್ದ ವಕೀಲ ಹರೀಶ್‌ ಸಾಳ್ವೆ| ಜಾಧವ್‌ ಪರ ವಕೀಲಿಕೆ ಮಾಡಿದ್ದ ಸಾಳ್ವೆಗೆ 1 ಕಾಣಿಕೆ ಹಸ್ತಾಂತರಿಸಿದ ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ| 

ನವದೆಹಲಿ[ಸೆ.28]: ಪಾಕಿಸ್ತಾನದ ಬಂಧನದಲ್ಲಿರುವ ಭಾರತದ ಕುಲಭೂಷಣ್‌ ಜಾಧವ್‌ ಪರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿದ್ದ ವಕೀಲ ಹರೀಶ್‌ ಸಾಳ್ವೆ ಅವರು ಕೇಳಿದ್ದ 1 ರು. ಗೌರವ ಸಂಭಾವನೆಯನ್ನು ಸುಷ್ಮಾ ಸ್ವರಾಜ್‌ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ಪೂರೈಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟ್ವಿಟರ್‌ನಲ್ಲಿ ದಿ.ಸುಷ್ಮಾ ಸ್ವರಾಜ್, ನಿಮಗೊಂದು ಮಾಹಿತಿ

ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಜಾಧವ್‌ ಪರ ವಾದಿಸಿ ನ್ಯಾಯ ಒದಗಿಸಿದ್ದ ಸಾಳ್ವೆ ಅವರು ಇದಕ್ಕೆ ಗೌರವಾರ್ಥವಾಗಿ ಕೇವಲ 1 ರು. ಸಂಭಾವನೆ ಪಡೆಯುವುದಾಗಿ ಹೇಳಿದ್ದರು. ಇದಕ್ಕೆ ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್‌ ಅಭಿನಂದನೆಯನ್ನೂ ಸಲ್ಲಿಸಿದ್ದರು. ಆದರೆ ಈ 1 ರುಪಾಯಿಯನ್ನು ಅವರಿಗೆ ಕೊಡಲು ಕಾಲ ಕೂಡಿ ಬಂದಿರಲಿಲ್ಲ. ಆದರೆ ಅಂತಿಮವಾಗಿ 2019ರ ಆ.6ರಂದು ಸಂಜೆ ಸಾಳ್ವೆ ಅವರಿಗೆ ಕರೆ ಮಾಡಿದ್ದ ಸುಷ್ಮಾ, ನಾಳೆ ಬಂದು 1 ರುಪಾಯಿ ಪಡೆದುಕೊಂಡು ಹೋಗಿ ಎಂದಿದ್ದರು. ಈ ಕರೆ ಮಾಡಿದ 2 ಗಂಟೆಯಲ್ಲೇ ಸುಷ್ಮಾ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು.

Scroll to load tweet…

ಈ ಹಿನ್ನೆಲೆಯಲ್ಲಿ ಶುಕ್ರವಾರ ಸಾಳ್ವೆ ಅವರ ಮನೆಗೆ ತೆರಳಿದ ಸುಷ್ಮಾರ ಪುತ್ರಿ ಬಾನ್ಸುರಿ, 1 ರುಪಾಯಿ ನಾಣ್ಯ ಹಸ್ತಾಂತರಿಸುವ ಮೂಲಕ ತಮ್ಮ ತಾಯಿಯ ವಾಗ್ದಾನ ಪೂರೈಸಿದರು.

ಸುಷ್ಮಾ ಬದುಕಿಸಲು ವೈದ್ಯರಿಂದ 70 ನಿಮಿಷಗಳ ಹರಸಾಹಸ!