ಜೈಲು ಪಾಲಾಗಿರುವ ರಾಮ್ ರಹೀಂಗೆ ಒಂದರ ಬಳಿಕ ಮತ್ತೊಂದರಂತೆ ಶಾಕಿಂಗ್ ಸುದ್ದಿಗಳು ಸಿಗುತ್ತಿವೆ. ಸದ್ಯ ಬಾಬಾ ರಾಮ್ ರಹೀಂ ಆಶ್ರಮ, ಸೇನೆಯ ಭದ್ರ ಕೋಟೆಯಲ್ಲಿ ಸಿಲುಕಿದೆ. ಹರ್ಯಾಣದ ಸಿರ್ಸಾ ಆಶ್ರಮಕ್ಕೆ ಸೇನೆ ಪ್ರವೇಶಿಸಿದೆ. ಆಶ್ರಮದಲ್ಲಿ ಜಮಾಯಿಸಿರುವ ರಾಮ್ ರಹೀಂ ಬೆಂಬಲಿಗರನ್ನು ಹೊರ ಹೋಗುವಂತೆ ಸೇನೆ ಸೂಚಿಸಿದೆ.

ಹರ್ಯಾಣ(ಆ.26): ಜೈಲು ಪಾಲಾಗಿರುವ ರಾಮ್ ರಹೀಂಗೆ ಒಂದರ ಬಳಿಕ ಮತ್ತೊಂದರಂತೆ ಶಾಕಿಂಗ್ ಸುದ್ದಿಗಳು ಸಿಗುತ್ತಿವೆ. ಸದ್ಯ ಬಾಬಾ ರಾಮ್ ರಹೀಂ ಆಶ್ರಮ, ಸೇನೆಯ ಭದ್ರ ಕೋಟೆಯಲ್ಲಿ ಸಿಲುಕಿದೆ. ಹರ್ಯಾಣದ ಸಿರ್ಸಾ ಆಶ್ರಮಕ್ಕೆ ಸೇನೆ ಪ್ರವೇಶಿಸಿದೆ. ಆಶ್ರಮದಲ್ಲಿ ಜಮಾಯಿಸಿರುವ ರಾಮ್ ರಹೀಂ ಬೆಂಬಲಿಗರನ್ನು ಹೊರ ಹೋಗುವಂತೆ ಸೇನೆ ಸೂಚಿಸಿದೆ.

Add Asianetnews Kannada as a Preferred SourcegooglePreferred

ಹರ್ಯಾಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇದೀಗ 6 ಸೇನಾ ತುಕಡಿಗಳನ್ನು ನಿಯೋಜಿಸಲಾಗಿದೆ. ಸದ್ಯ ಡೇರಾ ಸಚ್ಚಾ ಸೌದಾ ಪಂಗಡದ ಆಶ್ರಮಗಳಿಗೆ ಪ್ರವೇಶಿಸಿ ಅಲ್ಲಿ ಜಮಾಯಿಸಿರುವ ಭಕ್ತರನ್ನು ಹೊರ ಕಳುಹಿಸಿ ಬೀಗ ಜಡಿಯುವ ಕಾರ್ಯ ಆರಂಭವಾಗಿದೆ. ಈಗಾಗಲೇ 36 ಕಡೆಗಳಲ್ಲಿ ಬೀಗ ಜಡಿಯಲಾಗಿದೆ.

ಆಶ್ರಮದಲ್ಲಿರುವ ಭಕ್ತರು ಹೊರಗಿರುವ ಜನರಿಗೆ ಹಿಂಸಾಚಾರದಲ್ಲಿ ತೊಡಗಿರಲು ಪ್ರೇರೇಪಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಆಶ್ರಮಗಳಿಗೆ ಬೀಗ ಜಡಿಯುವ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.