ದಲಿತನ ಭೂಮಿ ಕಬಳಿಕೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್ಐಆರ್
ಬಿಹಾರದಲ್ಲಿ ದಲಿತ ವ್ಯಕ್ತಿಯೊಬ್ಬರ ಜಮೀನನ್ನು ಅತಿಕ್ರಮಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಪ್ರಕರಣವೊಂದು ದಾಖಲಾಗಿದೆ.
ಪಾಟ್ನಾ: ಬಿಹಾರದಲ್ಲಿ ದಲಿತ ವ್ಯಕ್ತಿಯೊಬ್ಬರ ಜಮೀನನ್ನು ಅತಿಕ್ರಮಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಪ್ರಕರಣವೊಂದು ದಾಖಲಾಗಿದೆ.
ಫೆ.2ರಂದು ವಿಶೇಷ ಎಸ್ಸಿ/ಎಸ್ಟಿ ಕೋರ್ಟ್ ಆದೇಶದಂತೆ ಗಿರಿರಾಜ್ ಸಿಂಗ್ ಮತ್ತು 32 ಇತರ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಸೋಪುರ್ ಗ್ರಾಮದ ನಿವಾಸಿ ದೂರುದಾರ ರಾಮ್ ನಾರಾಯಣ್ ಪ್ರಸಾದ್ ಎನ್ನುವವರು ಸಚಿವ ಗಿರಿರಾಜ್ ಸಿಂಗ್ ತಮಗೆ ಸೇರಿದ ಎರಡು ಎಕರೆ 6 ಗುಂಟೆ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ.
ಇದನ್ನು ಪ್ರತಿಭಟಿಸಿದ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಕೋರ್ಟ್ಗೆ ಅರ್ಜಿಸಲ್ಲಿಸಿದ್ದರು. ಎಸ್ಸಿ/ಎಸ್ಟಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.