2 ವರ್ಷಕ್ಕೊಮ್ಮೆ ಸಚಿವರ ಬದಲಾವಣೆ | ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಖಚಿತ | ಸಮ್ಮಿಶ್ರ ಸರ್ಕಾರವಾದ್ದರಿಂದ ಬಹುತೇಕ ಶಾಸಕರಿಗೆ ಸಚಿವರಾಗುವ ಸಾಧ್ಯತೆ ಕಡಿಮೆ| 

ಚಿತ್ರದುರ್ಗ (ಆ. 29):  ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಪುನರುಚ್ಚರಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವರ ಅಧಿಕಾರಾಧಿಯ​ನ್ನು ಎರಡು ವರ್ಷಗಳಿಗಳಿಗಷ್ಟೇ ಸೀಮಿತಗೊಳಿಸಲಾಗಿದ್ದು ನಂತರ ಬದಲಾಯಿಸಿ ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಮ್ಮಿಶ್ರ ಸರ್ಕಾರವಾದ್ದರಿಂದ ಬಹುತೇಕ ಶಾಸಕರಿಗೆ ಸಚಿವರಾಗುವ ಸಾಧ್ಯತೆ ಕಡಿಮೆ ಇವೆ. ಹಾಗಾಗಿ, ಮೊದಲ ಎರಡು ವರ್ಷಗಳಿಗೆ ಒಂದಿಷ್ಟುಮಂದಿಗೆ ಅವಕಾಶ ಮಾಡಿಕೊಡಲಾಗಿದ್ದು, ಉಳಿದ ಮೂರು ವರ್ಷಕ್ಕೆ ಉಳಿದವರನ್ನು ಪರಿಗಣಿಸಲಾಗುವುದು. ಈ ವಿಚಾರದಲ್ಲಿ ಯಾವುದೇ ಗೊಂದಲಗಳು ಬೇಡ. ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಉಳಿದ ಸ್ಥಾನಗಳಿಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.