ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಕ್ಕಿರುವ ನೆರೆ ರಾಜ್ಯದ ಜನರಿಗೆ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಜಮೀರ್ ಅಹಮದ್ ಖಾನ್ ಆಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ.

ಆಲಪ್ಪುಳ (ಜು. 31): ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಕ್ಕಿರುವ ಕೇರಳದ ಅಲಪ್ಪುಳ ಜಿಲ್ಲೆಯ ಜನರಿಗೆ, ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಜಮೀರ್ ಅಹಮದ್ ಖಾನ್ ಆಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ.

Add Asianetnews Kannada as a Preferred SourcegooglePreferred

ವಿಶೇಷವೆಂದರೆ ಆಲಪ್ಪುಳ ಲೋಕಸಭಾ ಕ್ಷೇತ್ರ, ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿಯಾಗಿರುವ ವೇಣುಗೋಪಾಲ್ ಅವರ ಸ್ವಕ್ಷೇತ್ರ. ವೇಣುಗೋಪಾಲ್ ಅವರ ಕೋರಿಕೆಯ ಅನ್ವಯ ಜಮೀರ್ ಈ ಕೊಡುಗೆ ನೀಡಿದ್ದಾರೆ.

ಭಾನುವಾರ ಲಾರಿ ಮೂಲಕ 50 ಟನ್ ಅಕ್ಕಿ, 10 ಟನ್ ಸಕ್ಕರೆ ಮತ್ತು ೨೫೦ ಕೆಜಿಯಷ್ಟು ಸಾಂಬಾರ್ ಪೌಡರ್ ಅನ್ನು ಸಚಿವ ಜಮೀರ್ ಆಲಪ್ಪುಳದ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ. ಆದರೆ ಈ ಕೊಡುಗೆಯನ್ನು ಜಮೀರ್, ಕರ್ನಾಟಕ ಸರ್ಕಾರದ ಪರವಾಗಿ ನೀಡಿಲ್ಲ. ಬದಲಾಗಿ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ವೇಣುಗೋಪಾಲ್ ಅವರಿಗೆ ಪತ್ರ ಬರೆದಿರುವ ಜಮೀರ್, ಈ ಆಹಾರ ಸಾಮಗ್ರಿ ಜನರಿಗೆ ಸೂಕ್ತ ರೀತಿಯಲ್ಲಿ ತಲುಪುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಕೋರಿದ್ದಾರೆ ಎಂದು ಮಲೆಯಾಳಂನ ಮನೋರಮಾ ಪತ್ರಿಕೆ ವರದಿ ಮಾಡಿದೆ.