ಜೆಡಿಎಸ್ ಕಚೇರಿ ಪ್ರತಿದಿನವೂ ಕೂಡ ಸಚಿವರು ಭೇಟಿಯು ಕಡ್ಡಾಯವಾಗಿದೆ. ಪಕ್ಷದ ಕಾರ್ಯಕರ್ತರ, ನಾಯಕರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್‌ನ ಸಚಿವರು ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಒಬ್ಬೊಬ್ಬರಂತೆ ಪಕ್ಷದ ಕಚೇರಿ ಜೆ.ಪಿ.ಭವನಕ್ಕೆ ಆಗಮಿಸಲಿದ್ದಾರೆ. 

ಬೆಂಗಳೂರು : ಪಕ್ಷದ ಕಾರ್ಯಕರ್ತರ, ನಾಯಕರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್‌ನ ಸಚಿವರು ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಒಬ್ಬೊಬ್ಬರಂತೆ ಪಕ್ಷದ ಕಚೇರಿ ಜೆ.ಪಿ.ಭವನಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಸೇರಿದಂತೆ ಎಲ್ಲಾ ಸಚಿವರು ಜೆ.ಪಿ.ಭವನದಲ್ಲಿ ರಜೆದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಲಭ್ಯವಾಗಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವೇಳೆ ಸಚಿವರ ಬಳಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದಾಗಿದೆ. ಇತ್ತೀಚೆಗಷ್ಟೇ ಪಕ್ಷದ ಕಾರ್ಯಕರ್ತರು ತಮ್ಮ ಅಳಲನ್ನು ತೋಡಿಕೊಳ್ಳಲು ವಿಧಾನಸೌಧಕ್ಕೆ ಅಲೆದಾಡಲು ಸಾಧ್ಯವಿಲ್ಲ, ಹೀಗಾಗಿ ಸಚಿವರು ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಚರ್ಚಿಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಜೆಡಿಎಸ್ ವರಿಷ್ಠರು ಇದೀಗ ಪಕ್ಷದ ಕಚೇರಿಗೆ ತೆರಳಿ ಕಾರ‌್ಯಕರ್ತರ ಮನವಿಯನ್ನು ಸ್ವೀಕರಿಸುವಂತೆ ಸೂಚನೆ ನೀಡಿದ್ದಾರೆ. ಸಚಿವರು ಪಕ್ಷದ ಕಾರ್ಯಕರ್ತರಿಗೆ ಸ್ಪಂದಿಸಲಿದ್ದಾರೆ.